ಆಂಧ್ರ ಪ್ರದೇಶ: 13 ವರ್ಷದ ಬಾಲಕಿಯೊಬ್ಬಳ ಮೇಲೆ 8 ತಿಂಗಳ ಅವಧಿಯಲ್ಲಿ ಸುಮಾರು 80 ಮಂದಿ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಬಹಿರಂಗವಾಗಿದೆ.
ಘಟನೆ ಸಂಬಂಧ ಪೊಲೀಸರು ಬಿ.ಟೆಕ್ ವಿದ್ಯಾರ್ಥಿ ಸೇರಿದಂತೆ 10 ಮಂದಿಯನ್ನು ಈಗಾಗಲೇ ಬಂಧಿಸಿದ್ದು, ಇನ್ನುಳಿದ ಆರೋಪಿಗಳ ವಿವರ ಪಡೆದುಕೊಂಡಿರುವ ಪೊಲೀಸರು ಅವರುಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ಮತ್ತೊಂದು ಶಾಕಿಂಗ್ ಸಂಗತಿಯೆಂದರೆ ಆರೋಪಿಗಳ ಪೈಕಿ ಓರ್ವ ಈಗ ಲಂಡನ್ ನಲ್ಲಿದ್ದಾನೆ ಎನ್ನಲಾಗಿದೆ.
ಜೂನ್ 2021 ರಲ್ಲಿ ಸಂತ್ರಸ್ಥೆ ಬಾಲಕಿ ತಾಯಿ, ಕೊರೊನಾ ಸಾಂಕ್ರಾಮಿಕದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಅವರಿಗೆ ಸ್ವರ್ಣ ಕುಮಾರಿ ಎಂಬ ಮಹಿಳೆಯ ಪರಿಚಯವಾಗುತ್ತದೆ.
ಬಾಲಕಿಯ ತಂದೆ 2021 ರ ಆಗಸ್ಟ್ ನಲ್ಲಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣದ ಮಾಹಿತಿ ಕಲೆ ಹಾಕಿದ್ದ ಪೊಲೀಸರು 2022 ರ ಜನವರಿಯಲ್ಲಿ ಮೊದಲ ಬಂಧನ ಮಾಡಿದ್ದರು. ನಂತರ ಮಾಹಿತಿ ಕಲೆ ಹಾಕುತ್ತಾ ಹೋದಂತೆ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.
ಬಾಲಕಿಯನ್ನು ವೇಶ್ಯಾವಾಟಿಕೆಗೆ ತಳ್ಳಿದ್ದ ಸ್ವರ್ಣ ಕುಮಾರಿ, ಅದರಿಂದ ಹಣ ಮಾಡಿಕೊಳ್ಳಲು ಮುಂದಾಗಿದ್ದಾಳೆ. ಬಾಲಕಿ ಇನ್ನೂ ಅಪ್ರಾಪ್ತೆಯಾಗಿದ್ದ ಕಾರಣ ಕಾಮುಕರ ಗುಂಪು ಆಕೆಯನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ, ಒಬ್ಬರಿಂದ ಮತ್ತೊಬ್ಬರಿಗೆ ಮಾರಾಟ ಮಾಡಿಕೊಂಡು ಹೋಗಿದೆ. ಈ 8 ತಿಂಗಳ ಅವಧಿಯಲ್ಲಿ ಆಕೆಯ ಮೇಲೆ 80 ಮಂದಿ ಅತ್ಯಾಚಾರವೆಸಗಿದ್ದಾರೆ.
ವಿಜಯವಾಡ, ಹೈದರಾಬಾದ್, ಕಾಕಿನಾಡ ಮತ್ತು ನೆಲ್ಲೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಲಾಗಿದ್ದು, ಇದೀಗ ವಿಸ್ತೃತ ತನಿಖೆ ನಡೆಸಿರುವ ಪೊಲೀಸರು ಏಪ್ರಿಲ್ 19 ರಂದು ಮತ್ತೆ 10 ಮಂದಿಯನ್ನು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಸೇರಿದಂತೆ ಎಲ್ಲರನ್ನೂ ಹೆಡೆಮುರಿ ಕಟ್ಟಿ ನ್ಯಾಯಾಂಗ ಕಟೆಕಟೆಯಲ್ಲಿ ನಿಲ್ಲಿಸಲು ಪೊಲೀಸರು ನಿರ್ಧರಿಸಿದ್ದು, ಈಗಾಗಲೇ ಇತರರ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ.
ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…
ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…
ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…
ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ…
ತಾಲ್ಲೂಕಿನಲ್ಲಿ ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಹಾಗೂ ₹10…