News Karnataka Kannada
Monday, May 06 2024
ಆಂಧ್ರಪ್ರದೇಶ

ಆಂಧ್ರಪ್ರದೇಶದಲ್ಲಿ ಕಾಲುವೆಗೆ ಬಿದ್ದ ಬಸ್: 7 ಮಂದಿ ದುರ್ಮರಣ

7 killed as bus falls into canal in Andhra Pradesh
Photo Credit : IANS

ಅಮರಾವತಿ: ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಬಸ್ ಕಾಲುವೆಗೆ ಉರುಳಿದ ಪರಿಣಾಮ ಮಗು ಸೇರಿದಂತೆ ಏಳು ಮಂದಿ ಮೃತಪಟ್ಟು, 12 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಅಬ್ದುಲ್ ಅಜೀಜ್ (65), ಅಬ್ದುಲ್ ಹನಿ (60), ಶೇಖ್ ರಮೀಜ್ (48), ಮುಲ್ಲಾ ನೂರ್ ಜಹಾನ್ (58), ಮುಲ್ಲಾ ಜಾನಿ ಬೇಗಂ (65), ಶೇಖ್ ಶಬೀನಾ (35) ಮತ್ತು ಶೇಖ್ ಹಿನಾ (6) ಎಂದು ಗುರುತಿಸಲಾಗಿದೆ.

ಪೊಡಿಲಿಯಿಂದ ಕಾಕಿನಾಡಕ್ಕೆ ತೆರಳುತ್ತಿದ್ದ ಬಸ್ ದರ್ಶಿ ಬಳಿಯ ಸಾಗರ್ ಕಾಲುವೆಗೆ ಬಿದ್ದಿದೆ. ಬಸ್ ನಲ್ಲಿ 35 ರಿಂದ 40 ಜನರಿದ್ದು, ಅವರು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಕಾಕಿನಾಡಕ್ಕೆ ಹೋಗುತ್ತಿದ್ದರು.

ಸ್ಥಳಕ್ಕೆ ಧಾವಿಸಿದ ಪೊಲೀಸರು, ಇತರ ಇಲಾಖೆಗಳ ಸಮನ್ವಯದೊಂದಿಗೆ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಪ್ರಾರಂಭಿಸಿದ್ದಾರೆ.

ಪೊಲೀಸರ ಪ್ರಕಾರ, ಸರ್ಕಾರಿ ಸ್ವಾಮ್ಯದ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮದ (ಎಪಿಎಸ್ಆರ್ಟಿಸಿ) ಬಸ್ ಅನ್ನು ಪ್ರಯಾಣಕ್ಕಾಗಿ ಬಾಡಿಗೆಗೆ ತೆಗೆದುಕೊಳ್ಳಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು