ಆಂಧ್ರಪ್ರದೇಶ

ಅಮರಾವತಿ: ಟಿಡಿಪಿ ಬಿಜೆಪಿ ಮರುಮೈತ್ರಿಯಾಗುವುದೇ: ವದಂತಿಗೆ ಪುಷ್ಟಿನೀಡಿದೆ ಬಾಬು, ಶಾ ಮಾತುಕತೆ

ಅಮರಾವತಿ: ತೆಲುಗು ದೇಶಂ ಪಕ್ಷದ (ಟಿಡಿಪಿ) ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿರುವುದು ಉಭಯ ಪಕ್ಷಗಳು ಮತ್ತೆ ಮೈತ್ರಿಗೆ ಮುಂದಾಗಲಿವೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ.

2018 ರಲ್ಲಿ ಟಿಡಿಪಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಿಂದ (ಎನ್‌ಡಿಎ) ಹೊರಬಂದ ನಂತರ ಅಮಿತ್ ಶಾ ಅವರೊಂದಿಗೆ ನಾಯ್ಡು ಅವರ ಮೊದಲ ಭೇಟಿ ಇದಾಗಿದೆ.

ಈ ವರ್ಷಾಂತ್ಯದಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆ ಮತ್ತು ಆಂಧ್ರಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ನಾಯ್ಡು ಉತ್ಸುಕರಾಗಿದ್ದಾರೆ ಎಂಬ ಮಾತುಗಳ ನಡುವೆ ಈ ಭೇಟಿ ಮಹತ್ವ ಪಡೆದಿದೆ.

ಒಂದು ಗಂಟೆಯ ಸುದೀರ್ಘ ಸಭೆಯಲ್ಲಿ, ಮಾಜಿ ಮುಖ್ಯಮಂತ್ರಿ ಅಮಿತ್ ಶಾ ಮತ್ತು ನಡ್ಡಾ ಇಬ್ಬರೂ ತೆಲುಗು ರಾಜ್ಯಗಳಲ್ಲಿ ಟಿಡಿಪಿ-ಬಿಜೆಪಿ ಮೈತ್ರಿಯ ಪ್ರಸ್ತಾಪವನ್ನು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಜಿ20 ರಂದು ನಡೆಯಲಿರುವ ನಾಯಕರ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಯಲ್ಲಿರುವ ನಾಯ್ಡು ಅವರು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

ಟಿಡಿಪಿ ಸಂಸದರಾದ ಕೆ.ರವೀಂದ್ರ ಕುಮಾರ್, ಕೇಸಿನೇನಿ ನಾನಿ, ರಾಮಮೋಹನ್ ನಾಯ್ಡು ಹಾಗೂ ಮಾಜಿ ಸಂಸದ ಕೆ.ರಾಮಮೋಹನ್ ರಾವ್ ಅವರೊಂದಿಗೆ ಶನಿವಾರ ಸಂಜೆ ನಾಯ್ಡು ದೆಹಲಿ ತಲುಪಿದರು. ವೈಎಸ್‌ಆರ್‌ಸಿಪಿ ಬಂಡಾಯ ಸಂಸದ ರಘುರಾಮ ಕೃಷ್ಣರಾಜು ಅವರು ಟಿಡಿಪಿ ಮುಖ್ಯಸ್ಥರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಅಲ್ಲಿಂದ ಟಿಡಿಪಿ ಸಂಸದ ಗಲ್ಲಾ ಜಯದೇವ್ ಅವರ ನಿವಾಸಕ್ಕೆ ತೆರಳಿದರು. ನಂತರ ರಾತ್ರಿ 8.55ರ ಸುಮಾರಿಗೆ ನಾಯ್ಡು ಒಬ್ಬರೇ ಅಮಿತ್ ಶಾ ನಿವಾಸಕ್ಕೆ ಬಂದರು. ಕೆಲವು ನಿಮಿಷಗಳ ನಂತರ ನಡ್ಡಾ ಕೂಡ ಅಲ್ಲಿಗೆ ಬಂದರು. ಮೂವರ ಸಭೆ ರಾತ್ರಿ 10 ಗಂಟೆಯವರೆಗೂ ಮುಂದುವರೆಯಿತು. ಸಭೆಯ ನಂತರ ಅವರ್ಯಾರೂ ಮಾಧ್ಯಮಗಳೊಂದಿಗೆ ಮಾತನಾಡಲಿಲ್ಲ.

Ashika S

Recent Posts

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೊ ತುಣುಕು ವೈರಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ…

2 mins ago

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

3 mins ago

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

26 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

35 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

41 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

48 mins ago