News Karnataka Kannada
Sunday, May 05 2024
ಆಂಧ್ರಪ್ರದೇಶ

ಅಮರಾವತಿ: ಭೀಕರ ರಸ್ತೆ ಅಪಘಾತ, ಐವರ ದುರ್ಮರಣ

ಪ್ರೀತಿಸಿದವರೊಂದಿಗೆ ವಿವಾಹವಾಗದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ಲ ಪಟ್ಟಣದಲ್ಲಿ ನಡೆದಿದೆ.
Photo Credit : IANS

ಅಮರಾವತಿ: ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಪ್ರಕಾಶಂ ಜಿಲ್ಲೆಯ ಕುಂಬಮ್ ಬಳಿ ಹಿಂದಿನಿಂದ ಕಾರೊಂದು ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಎಲ್ಲಾ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಮರಾವತಿ-ಅನಂತಪುರ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಮೂವರು ಮಹಿಳೆಯರು ಸೇರಿದಂತೆ ಮೃತರು ಮಾಚೆರ್ಲಾದಿಂದ ತಿರುಪತಿಗೆ ತೆರಳುತ್ತಿದ್ದರು.

ಮೃತರನ್ನು ಅನಿಮಿ ರೆಡ್ಡಿ (60), ಗುರವಮ್ಮ (60), ಅನಂತಮ್ಮ (55), ಆದಿಲಕ್ಷ್ಮಿ (58) ಮತ್ತು ನಾಗಿ ರೆಡ್ಡಿ (24) ಎಂದು ಗುರುತಿಸಲಾಗಿದೆ.

ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಶವಗಳನ್ನು ಶವಪರೀಕ್ಷೆಗಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಮೃತರು ಪಲ್ನಾಡು ಜಿಲ್ಲೆಯ ವೆಲ್ದುರ್ತಿ ಮಂಡಲದ ಸಿರಿಗಿರಿಪಾಡು ಗ್ರಾಮದವರು.

ಅತಿಯಾದ ವೇಗವು ಅಪಘಾತ ಕಾರಣವಾಯಿತು ಎಂದು ಪೊಲೀಸರು ಶಂಕಿಸಿದ್ದಾರೆ.  ಪ್ರಕರಣವನ್ನು ದಾಖಲಿಸಿದ್ದಾರೆ ಮತ್ತು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು