News Karnataka Kannada
Tuesday, April 30 2024
ಆಂಧ್ರಪ್ರದೇಶ

ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ, ಸ್ಥಳಕ್ಕಾಗಮಿಸಿದ ವಾರ್ಡನ್ ಗೆ ಹೃದಯಾಘಾತ

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಕಾರೊಂದು ಕಂದಕಕ್ಕೆ ಬಿದ್ದ ಪರಿಣಾಮ ದಂಪತಿ ಹಾಗೂ ಮಗು ಸಾವನ್ನಪ್ಪಿದ್ದಾರೆ.
Photo Credit : Pexels

ಅಮರಾವತಿ, ಫೆ.5: ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿ ನಡೆದ ದುರಂತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನನ್ನು ನೋಡಲು ಸ್ಥಳಕ್ಕಾಗಮಿಸಿದ ವಾರ್ಡನ್  ಆಘಾತದಿಂದ ಸಾವನ್ನಪ್ಪಿದ್ದಾರೆ.

ಗುಡೂರಿನ ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ದಹನೇಶ್ವರ ರೆಡ್ಡಿ (20) ಶನಿವಾರ ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವೈಎಸ್ಆರ್ ಕಡಪ ಜಿಲ್ಲೆಯವನಾದ ವಿದ್ಯಾರ್ಥಿ ಸಿಎಸ್ಇ ಎರಡನೇ ವರ್ಷ ಓದುತ್ತಿದ್ದನು.

ವಿಷಯ ತಿಳಿದ ಹಾಸ್ಟೆಲ್ ವಾರ್ಡನ್ ಬಿ.ಶ್ರೀನಿವಾಸ್ ನಾಯ್ಡು, ಕಾಲೇಜಿನ ಪ್ರಾಂಶುಪಾಲರು ಮತ್ತು ಇತರ ಸಿಬ್ಬಂದಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಸ್ಥಳಕ್ಕೆ ಧಾವಿಸಿದರು.

ಶ್ರೀನಿವಾಸುಲು ನಾಯ್ಡು (54) ಎಂಬವರು ನೇಣು ಬಿಗಿದುಕೊಂಡ ವಿದ್ಯಾರ್ಥಿಯನ್ನು ನೋಡಿ ಆಘಾತಕ್ಕೊಳಗಾಗಿದ್ದಾರೆ. ಅವರು ಕುಸಿದುಬಿದ್ದು ಸ್ಥಳದಲ್ಲೇ ನಿಧನರಾದರು. ನಾಯ್ಡು ಅವರಿಗೆ ಹೃದಯ ಸ್ತಂಭನವಾಗಿದೆ ಎಂದು ಶಂಕಿಸಲಾಗಿದೆ.

ವಿದ್ಯಾರ್ಥಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು