ಆಂಧ್ರಪ್ರದೇಶ: ನಂಬೂರು ಎಂಬಲ್ಲಿ ನಡೆದ ಅಪಘಾತವೊಂದರಲ್ಲಿ ಉಚ್ಚಿಲ ಭಾಸ್ಕರನಗರದ ನಿವಾಸಿ ಬಷೀರ್ ಎಂಬವರು ಸಾವಿಗೀಡಾದ ಘಟನೆ ಇಂದು ನಡೆದಿದೆ.
ಮೀನಿನ ಲಾರಿಯಲ್ಲಿ ಚಾಲಕನಾಗಿದ್ದ ಬಷೀರ್, ಗುರುವಾರ ಆಂಧ್ರಪ್ರದೇಶದ ನಂಬೂರು-ಕಝ ರಸ್ತೆಯಲ್ಲಿ ಸಾಗುತಿದ್ದ ವೇಳೆ ನಿಯಂತ್ರಣ ತಪ್ಪಿ ಲಾರಿಯೊಂದಕ್ಕೆ ಡಿಕ್ಕಿ ಹೊಡಿದಿದೆ. ಈ ಭೀಕರ ಅಪಘಾತದಲ್ಲಿ ಬಷೀರ್ ಸಾವಿಗೀಡಾಗಿದ್ದಾರೆ. ಜೊತೆಗೆ ಡಿಕ್ಕಿಯಾದ ಲಾರಿಯ ಚಾಲಕ ಕೂಡ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಗೋವಾ ಮೂಲದ ಮೀನಿನ ಲಾರಿಯಲ್ಲಿ ಚಾಲಕನಾಗಿರುವ ಬಷೀರ್, ಓರ್ವ ಉತ್ತಮ ಕ್ರಿಕೆಟಿಗನಾಗಿಯೂ ಹೆಸರುಗಳಿಸಿದ್ದರು. ಮೀನು ಸಾಗಾಟಕ್ಕಾಗಿ ಮಂಗಳವಾರ ಚೆನ್ನೈಗೆ ತೆರಳಿದ್ದ ಬಷೀರ್, ಅಲ್ಲಿ ಲಾರಿಯಲ್ಲಿ ಮೀನು ತುಂಬಿಸಿಕೊಂಡು ಒಡಿಶಾಕ್ಕೆ ತೆರಳುತ್ತಿದ್ದರು. ಆಂಧ್ರಪ್ರದೇಶದ ನಂಬೂರು-ಕಝ ರಸ್ತೆಯಲ್ಲಿ ಸಾಗುತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಉಚ್ಚಿಲ ಭಾಸ್ಕರನಗರದ ಶಾಬುದ್ದೀನ್- ನಬಿಸಾ ಪುತ್ರನಾಗಿರುವ ಬಷೀರ್, ಬೆಳಪುವಿನಲ್ಲಿ ಮನೆಮಾಡಿಕೊಂಡಿದ್ದರು. ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದು, ಅವರ ಮೃತದೇಹವನ್ನು ಹುಟ್ಟೂರು ಉಚ್ಚಿಲಕ್ಕೆ ತರಲು ಅವರ ಸಹೋದರರು ಹಾಗು ಗೆಳೆಯರು ಆಂಧ್ರಪ್ರದೇಶಕ್ಕೆ ಹೊರಟಿದ್ದಾರೆ. ಮೃತದೇಹ ತರಲು ಒಂದೆರೆಡು ದಿನ ಬೇಕಾಗಿದ್ದು, ಅವರ ಅಗಲಿಕೆಯಿಂದ ಮನೆಯಲ್ಲಿ ಆಕ್ರಂದನ ಮುಗಿಲುಮುಟ್ಟಿದೆ.
ಜಿಲ್ಲೆಯ ಜನ ಸ್ವತಂತ್ರರಾಗಿ ಬದುಕಬೇಕಾದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…
ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.
ಲೋಕಸಭಾ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲಿ ಬಿಜೆಪಿ ಈ ಸಲ ಒಂದಂಕಿ ಸಂಖ್ಯೆ ದಾಟುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರನ್ನು 4 ದಿನ ಎಸ್ಐಟಿ ವಶಕ್ಕೆ…
ನಾಯಿಗಳಿಗೆ ಊಟ ಹಾಕುತ್ತಿದ್ದ ಸಂದರ್ಭದಲ್ಲಿ ಅಡ್ಡಿಪಡಿಸಿದರೆಂಬ ಕಾರಣಕ್ಕೆ ಭದ್ರತಾ ಸಿಬ್ಬಂದಿ ಮೇಲೆ ಮಹಿಳೆಯೊಬ್ಬರು ದೂರು ನೀಡಿದ್ದು, ಅಶೋಕನಗರ ಠಾಣೆಯಲ್ಲಿ ಪ್ರಕರಣ…