ಆಂಧ್ರಪ್ರದೇಶದಲ್ಲಿ ಮೀನಿನ ಲಾರಿ ಅಪಘಾತ: ಉಚ್ಚಿಲ ಭಾಸ್ಕರನಗರದ ನಿವಾಸಿ ದುರ್ಮರಣ

ಆಂಧ್ರಪ್ರದೇಶ: ನಂಬೂರು ಎಂಬಲ್ಲಿ ನಡೆದ ಅಪಘಾತವೊಂದರಲ್ಲಿ ಉಚ್ಚಿಲ ಭಾಸ್ಕರನಗರದ ನಿವಾಸಿ ಬಷೀರ್ ಎಂಬವರು ಸಾವಿಗೀಡಾದ ಘಟನೆ ಇಂದು ನಡೆದಿದೆ.

ಮೀನಿನ ಲಾರಿಯಲ್ಲಿ ಚಾಲಕನಾಗಿದ್ದ ಬಷೀರ್, ಗುರುವಾರ ಆಂಧ್ರಪ್ರದೇಶದ ನಂಬೂರು-ಕಝ ರಸ್ತೆಯಲ್ಲಿ ಸಾಗುತಿದ್ದ ವೇಳೆ ನಿಯಂತ್ರಣ ತಪ್ಪಿ ಲಾರಿಯೊಂದಕ್ಕೆ ಡಿಕ್ಕಿ ಹೊಡಿದಿದೆ. ಈ ಭೀಕರ ಅಪಘಾತದಲ್ಲಿ ಬಷೀರ್ ಸಾವಿಗೀಡಾಗಿದ್ದಾರೆ. ಜೊತೆಗೆ ಡಿಕ್ಕಿಯಾದ ಲಾರಿಯ ಚಾಲಕ ಕೂಡ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಗೋವಾ ಮೂಲದ ಮೀನಿನ ಲಾರಿಯಲ್ಲಿ ಚಾಲಕನಾಗಿರುವ ಬಷೀರ್, ಓರ್ವ ಉತ್ತಮ ಕ್ರಿಕೆಟಿಗನಾಗಿಯೂ ಹೆಸರುಗಳಿಸಿದ್ದರು. ಮೀನು ಸಾಗಾಟಕ್ಕಾಗಿ ಮಂಗಳವಾರ ಚೆನ್ನೈಗೆ ತೆರಳಿದ್ದ ಬಷೀರ್, ಅಲ್ಲಿ ಲಾರಿಯಲ್ಲಿ ಮೀನು ತುಂಬಿಸಿಕೊಂಡು ಒಡಿಶಾಕ್ಕೆ ತೆರಳುತ್ತಿದ್ದರು. ಆಂಧ್ರಪ್ರದೇಶದ ನಂಬೂರು-ಕಝ ರಸ್ತೆಯಲ್ಲಿ ಸಾಗುತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಉಚ್ಚಿಲ ಭಾಸ್ಕರನಗರದ ಶಾಬುದ್ದೀನ್- ನಬಿಸಾ ಪುತ್ರನಾಗಿರುವ ಬಷೀರ್, ಬೆಳಪುವಿನಲ್ಲಿ ಮನೆಮಾಡಿಕೊಂಡಿದ್ದರು. ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದು, ಅವರ ಮೃತದೇಹವನ್ನು ಹುಟ್ಟೂರು ಉಚ್ಚಿಲಕ್ಕೆ ತರಲು ಅವರ ಸಹೋದರರು ಹಾಗು ಗೆಳೆಯರು ಆಂಧ್ರಪ್ರದೇಶಕ್ಕೆ ಹೊರಟಿದ್ದಾರೆ. ಮೃತದೇಹ ತರಲು ಒಂದೆರೆಡು ದಿನ ಬೇಕಾಗಿದ್ದು, ಅವರ ಅಗಲಿಕೆಯಿಂದ ಮನೆಯಲ್ಲಿ ಆಕ್ರಂದನ ಮುಗಿಲುಮುಟ್ಟಿದೆ.

Ashika S

Recent Posts

ಸ್ವತಂತ್ರರಾಗಿ ಬದುಕಲು ಸ್ವತಂತ್ರ ಅಭ್ಯರ್ಥಿಯನ್ನು ಬೆಂಬಲಿಸಿ: ಕೆ. ಬುಕ್ಕಾ ಮನವಿ

ಜಿಲ್ಲೆಯ ಜ‌ನ ಸ್ವತಂತ್ರರಾಗಿ ಬದುಕಬೇಕಾದರೆ‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…

5 mins ago

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

15 mins ago

ಪಾದಯಾತ್ರೆ ನಡೆಸಿ ಮತಯಾಚಿಸಿದ ಶಾಸಕ ಅಶೋಕ್ ಮನಗೂಳಿ

ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.

27 mins ago

ಲೋಕಸಭಾ ಚುನಾವಣೆ: ಬಿಜೆಪಿ ಒಂದಂಕಿ ದಾಟಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ

ಲೋಕಸಭಾ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲಿ ಬಿಜೆಪಿ ಈ ಸಲ ಒಂದಂಕಿ ಸಂಖ್ಯೆ‌ ದಾಟುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

37 mins ago

4 ದಿನ ಎಸ್‌ಐಟಿ ಕಸ್ಟಡಿಗೆ ಹೆಚ್‌.ಡಿ.ರೇವಣ್ಣ: ನ್ಯಾಯಾಲಯ ಆದೇಶ

ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಅವರನ್ನು 4 ದಿನ ಎಸ್‌ಐಟಿ  ವಶಕ್ಕೆ…

57 mins ago

ನಾಯಿಗಳಿಗೆ ಊಟ ಹಾಕುತ್ತಿದ್ದ ವೇಳೆ ಅಡ್ಡಿ: ಭದ್ರತಾ ಸಿಬ್ಬಂದಿ ಮೇಲೆ ಮಹಿಳೆ ದೂರು

ನಾಯಿಗಳಿಗೆ ಊಟ ಹಾಕುತ್ತಿದ್ದ ಸಂದರ್ಭದಲ್ಲಿ ಅಡ್ಡಿಪಡಿಸಿದರೆಂಬ ಕಾರಣಕ್ಕೆ ಭದ್ರತಾ ಸಿಬ್ಬಂದಿ ಮೇಲೆ ಮಹಿಳೆಯೊಬ್ಬರು ದೂರು ನೀಡಿದ್ದು, ಅಶೋಕನಗರ ಠಾಣೆಯಲ್ಲಿ ಪ್ರಕರಣ…

1 hour ago