News Karnataka Kannada
Tuesday, April 30 2024
ಆಂಧ್ರಪ್ರದೇಶ

ಆಂಧ್ರಪ್ರದೇಶ: ಮದುವೆಗೆ ನಿರಾಕರಿಸಿದ ಗೆಳತಿಯನ್ನು ಕೊಲೆ ಮಾಡಿದ ಯುವಕ

Andhra Pradesh: Man kills girlfriend for refusing to marry him
Photo Credit : IANS

ಅಮರಾವತಿ: ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಪೆದಕಕಣಿ ಮಂಡಲದ ತಕ್ಕೆಲ್ಲಪಾಡು ಗ್ರಾಮದಲ್ಲಿ ಟೆಕ್ಕಿಯೊಬ್ಬ ಗೆಳತಿಯನ್ನೇ ಕೊಲೆ ಮಾಡಿದ ಘಟನೆ ನಡೆದಿದೆ.

ಮೃತ ಯುವತಿ ಕೃಷ್ಣಾ ಜಿಲ್ಲೆಯ ವುಯ್ಯೂರು ಮಂಡಲದ ಕೃಷ್ಣಾಪುರಂ ಗ್ರಾಮದ 20 ವರ್ಷದ ತಪಸ್ವಿ. ವಿಜಯವಾಡ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಜ್ಞಾನೇಶ್ವರ್ ಕೊಲೆ ಮಾಡಿದವನು. 2 ವರ್ಷಗಳ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ ತಪಸ್ವಿ ಹಾಗೂ ಜ್ಞಾನೇಶ್ವರ್ ಪರಿಚಯವಾಗಿದೆ. ಪರಿಚಯವಾದ ನಂತರ ಜ್ಞಾನೇಶ್ವರ್ ಗೆ ಸಲುಗೆ ಬೆಳೆದಿದೆ. ಹೀಗಾಗಿ ಇತ್ತೀಚೆಗೆ ತಪಸ್ವಿಯನ್ನು ಜ್ಞಾನೇಶ್ವರ್ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದನಂತೆ. ಆದರೆ ತಪಸ್ವಿ ಇದಕ್ಕೆ ನಿರಾಕರಿಸಿದ್ದಾಳೆ. ಈ ವಿಚಾರಕ್ಕೆ ಇವರಿಬ್ಬರ ಜಗಳ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಇರಿದಿದ್ದಾನೆ‌.

ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ದಿದರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು