News Karnataka Kannada
Sunday, May 05 2024
ಆಂಧ್ರಪ್ರದೇಶ

ತಿರುಮಲದಲ್ಲಿ ಚಿರತೆಯೊಂದಿಗೆ ಕರಡಿ ಪ್ರತ್ಯಕ್ಷ

Bear spotted with leopard in Tirumala
Photo Credit : News Kannada

ತಿರುಪತಿ: ತಿರುಮಲ ಬೆಟ್ಟದಲ್ಲಿ ಕಾಲ್ನಡಿಗೆಯಲ್ಲಿ ತೆರಳಲು ಭಕ್ತರು ಭಯಪಡುವಂತಾಗಿದೆ. ಚಿರತೆಗಳ ಭಯ ಭಕ್ತರನ್ನು ಕಾಡುತ್ತಿದೆ. ಮೆಟ್ಟಿಲು ಹತ್ತಿ ಮಗುವನ್ನು ಕೊಂದ ಚಿರತೆ ಕೊನೆಗೂ ಸಿಕ್ಕಿಬಿದ್ದಿದ್ದು, ಇದೀಗ ಮತ್ತೊಂದು ಚಿರತೆ ಹಾಗೂ ಕರಡಿ ಕಾಣಿಸಿಕೊಂಡಿರುವುದರಿಂದ ಭಕ್ತರ ಚಿಂತೆಗೆ ಕಾರಣವಾಗಿದೆ.

ಬುಧವಾರ ಬೆಳಗ್ಗೆ ಪಾದಚಾರಿ ಮಾರ್ಗದ ಬಳಿ ಚಿರತೆಯೊಂದು ಸಂಚರಿಸಿದೆ ಎಂದು ಭಕ್ತರು ಹೇಳುತ್ತಾರೆ. ಕೆಲ ಭಕ್ತರು ಗುಂಪು ಗುಂಪಾಗಿ ಹೋಗುತ್ತಿದ್ದಾಗ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ಬಳಿಯ ನಾಮಲಗಣಿ ಬಳಿ ಮರಗಳ ನಡುವೆ ಚಿರತೆ ಕಂಡ ಭಕ್ತರು ಭಯಭೀತರಾಗಿ ಓಡಿದರು.

ಸ್ವಲ್ಪ ಸಮಯದ ನಂತರ ಕರಡಿಯೂ ಕಾಣಿಸಿಕೊಂಡಿದೆ. ಗಾಬರಿಗೊಂಡ ಭಕ್ತರು ಈ ವಿಷಯವನ್ನು ಟಿಟಿಡಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಟಿಟಿಡಿ ಹಾಗೂ ಅರಣ್ಯಾಧಿಕಾರಿಗಳ ತಂಡ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ತಿರುಮಲ ಅಲಿಪಿರಿ ಮಾರ್ಗದಲ್ಲಿ ಮತ್ತೆ ತೀವ್ರ ಆತಂಕ ಮತ್ತು ಉದ್ವಿಗ್ನತೆ ಉಂಟಾಗಿದೆ. ಕಾಡು ಪ್ರಾಣಿಗಳ ದಾಂಗುಡಿಯಿಟ್ಟಿ ಸರಣಿ ಘಟನೆಗಳಿಂದ ಭಕ್ತರು ಆತಂಕಗೊಂಡಿದ್ದಾರೆ.

ಈ ನಡುವೆ ತಿರುಮಲ ಮೆಟ್ಟಿಲುಗಳ ಆಸುಪಾಸಿನಲ್ಲಿ ಮೂರು ಚಿರತೆಗಳು ಓಡಾಡುತ್ತಿರುವುದನ್ನು ಟಿಟಿಡಿ ಬಹಿರಂಗಪಡಿಸಿದೆ. ಅವನ್ನು ಹಿಡಿಯಲು ಅರಣ್ಯಾಧಿಕಾರಿಗಳು ಹಾಗೂ ಟಿಟಿಡಿ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ಸಿಇಒ ಧರ್ಮಾ ರೆಡ್ಡಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು