ಆಂಧ್ರಪ್ರದೇಶ: ಎಪಿ ಸ್ಕಿಲ್ ಡೆವಲಪ್ಮೆಂಟ್ ಹಗರಣ ಪ್ರಕರಣದಲ್ಲಿ ಬಂಧಿತರಾಗಿರುವ ಚಂದ್ರಬಾಬು ನಾಯ್ಡು ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ಇಂದು ಗಾಂಧಿ ಜಯಂತಿಯಂದು ಟಿಡಿಪಿ ನಾಯಕರು ಬಂಧನದ ವಿರುದ್ಧ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಇದರಲ್ಲಿ ಚಂದ್ರಬಾಬು ನಾಯ್ಡು, ನಾರಾ ಭುವನೇಶ್ವರಿ, ಲೋಕೇಶ್ ಸೇರಿದಂತೆ ಎಲ್ಲರೂ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲಿದ್ದಾರೆ. ಚಂದ್ರಬಾಬು ಜೈಲಿನಲ್ಲಿಯೇ ಒಂದು ದಿನ ಸತ್ಯಾಗ್ರಹ ಆರಂಭಿಸಲಿದ್ದಾರೆ. ಸತ್ಯಮೇವ ಜಯತೆ ಹೆಸರಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಬೆಳಗ್ಗೆ 10ರಿಂದ ಸಂಜೆ 5ರವರೆಗೆ ರಾಜಮಹೇಂದ್ರವರಂ ಕ್ವಾರಿ ಮಾರುಕಟ್ಟೆ ಪ್ರದೇಶದಲ್ಲಿ ನಿರ್ಮಿಸಿರುವ ಆವರಣದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಎಪಿ ಸ್ಕಿಲ್ ಡೆವಲಪ್ಮೆಂಟ್ ಕೇಸ್ ಗೆ ಸಂಬಂಧಿಸಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ಅನ್ನು ರದ್ದುಗೊಳಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಂಧ್ರಪ್ರದೇಶ ಹೈ ಕೋರ್ಟ್ ವಜಾಗೊಳಿಸಿರುವುದನ್ನು ಪ್ರಶ್ನಿಸಿ ತೆಲುಗುದೇಶಂ ಪಕ್ಷದ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಇದೇ ಅ.೩ರಂದು ಕೋರ್ಟ್ ನಲ್ಲಿ ನಡೆಯಲಿದೆ.