News Karnataka Kannada
Saturday, May 11 2024
ಆಂಧ್ರಪ್ರದೇಶ

ಚಂದ್ರಯಾನ-3: ಚಂದ್ರಯಾನ ಯೋಜನೆಯಿಂದ ದೇಶಕ್ಕೇನು ಲಾಭ?

chandrayaan-3
Photo Credit : By Author

ಶ್ರೀಹರಿಕೋಟಾ: ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಿದೆ.

ಇನ್ನು ಈ ಚಂದ್ರಯಾನ 3 ಯೋಜನೆ ಯಶಸ್ವಿಯಾದರೆ ಚಂದ್ರನ ಮೇಲೆ ನೌಕೆ ಇಳಿಸಿದ 4ನೇ ದೇಶ ಅನ್ನೋ ಹೆಗ್ಗಳಿಕೆ ಭಾರತಕ್ಕೆ ಸಿಗಲಿದೆ. ಇವರೆಗೆ ಅಮೆರಿಕ, ರಷ್ಯಾ ಹಾಗೂ ಚೀನಾ ದೇಶಗಳು ಮಾತ್ರ ಚಂದ್ರನ ಮೇಲೆ ನೌಕೆ ಇಳಿಸಿವೆ. ಇನ್ನು ಈ ಯೋಜನೆ ಯಶಸ್ವಿಯಾದರೆ, ಭಾರತದ ಆಂತರಿಕ್ಷ ವಿಜ್ಞಾನ ವಲಯಕ್ಕೆ ಬೂಸ್ಟ್‌ ಸಿಗುತ್ತದೆ. ಉಪಗ್ರಹ ಉಡಾವಣೆ ಸೇರಿದಂತೆ ಹಲವು ವಿಚಾರಗಳಿಗೆ ವಿಶ್ವದ ಹಲವು ರಾಷ್ಟ್ರಗಳು ಭಾರತವನ್ನೇ ಅವಲಂಬಿಸಲಿವೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಹೂಡಿಕೆ ಇನ್ನಷ್ಟು ಹೆಚ್ಚಾಗಲಿದೆ. ಎಲ್ಲಕ್ಕಿಂತಾ ಮುಖ್ಯವಾಗಿ ಇಸ್ರೋ ಮೇಲಿನ ನಂಬಿಕೆ ಇನ್ನಷ್ಟು ಹೆಚ್ಚಾಗಲಿದೆ.

4 ವರ್ಷಗಳ ಹಿಂದೆ 2019ರಲ್ಲಿ ಚಂದ್ರಯಾನ 2 ಯೋಜನೆ ಆರಂಭವಾದಾಗ ಕೂಡಾ ಇದೇ ಸಂಭ್ರಮ ಮನೆ ಮಾಡಿತ್ತು. ರಾಕೆಟ್ ಯಶಸ್ವಿಯಾಗಿ ಹಾರಿತ್ತು. ಆದ್ರೆ, ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಇಳಿಯುವಾಗ ಮಾತ್ರ ಎಡವಟ್ಟಾಗಿತ್ತು. ಈ ಬಾರಿ ಆ ರೀತಿಯ ತಪ್ಪುಗಳು ಮರುಕಳಿಸದಂತೆ ಇಸ್ರೋ ವಿಜ್ಞಾನಿಗಳು ವಿನ್ಯಾಸ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು