News Karnataka Kannada
Thursday, May 02 2024
ಆಂಧ್ರಪ್ರದೇಶ

ಆಂಧ್ರದಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ: ನಾಲ್ವರು ಸಾವು

Four killed as two cars collide in Andhra Pradesh
Photo Credit : IANS

ಅಮರಾವತಿ: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಚಿತ್ತೂರು-ಕಡಪಾ ರಾಷ್ಟ್ರೀಯ ಹೆದ್ದಾರಿಯ ರಾಮಪುರಂ ಮಂಡಲದ ಕೊಥಪಲ್ಲಿ ಕ್ರಾಸ್ ಬಳಿ ಭಾನುವಾರ ಮುಂಜಾನೆ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ಪೊಲೀಸರು ಗಾಯಾಳುಗಳನ್ನು ಕಡಪದಲ್ಲಿರುವ ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ಗೆ ಸ್ಥಳಾಂತರಿಸಿದ್ದಾರೆ.

ಮೃತರನ್ನು ಲಕ್ಷ್ಮಮ್ಮ (65), ಚಿನ್ನಕ್ಕ (60), ನರಸಯ್ಯ (41) ಮತ್ತು ಕಾರು ಚಾಲಕ ರಾಜಾ ರೆಡ್ಡಿ (35) ಎಂದು ಗುರುತಿಸಲಾಗಿದೆ.

ಲಕ್ಷ್ಮಮ್ಮ, ಅವರ ಮಗ ನರಸಯ್ಯ ಮತ್ತು ಚಾಲಕ ರಾಜಾರೆಡ್ಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿನ್ನಕ್ಕ ಮತ್ತು ಹರ್ಷವರ್ಧನ್ ಎಂಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿನ್ನಕ ಅವರು ರಿಮ್ಸ್ ಕಡಪದಲ್ಲಿ ನಿಧನರಾದರು.

ರಾಯಚೋಟಿಯಿಂದ ಕಡಪಕ್ಕೆ ತೆರಳುತ್ತಿದ್ದ ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಅವರನ್ನು ರಿಮ್ಸ್ ಕಡಪಕ್ಕೆ ದಾಖಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು