ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಚಂದ್ರಯಾನ-3 ಯಶಸ್ವಿ ಬಳಿಕ ಗಗಯಾನ ಅ.21ರಂದು ಬೆಳಗ್ಗೆ 8.30 ಕ್ಕೆ ನಿಗದಿಯಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಆಂಧ್ರಪ್ರದೇಶದ ಶ್ರೀಹರಿಕೋಟಾದಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಗಗನಯಾನ ಯೋಜನೆಯ ಪರೀಕ್ಷಾರ್ಥ ಹಾರಾಟ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಈ ಬಗ್ಗೆ ಮಾತನಾಡಿದ ಇಸ್ರೋ ಮುಖ್ಯಸ್ಥ ಇಂಜಿನ್ ಇಗ್ನಿಷನ್ ವ್ಯವಸ್ಥೆಯಲ್ಲಿ ಸಮಸ್ಯೆ ಕಂಡುಬಂದಿದೆ. ಏನು ತಪ್ಪಾಗಿದೆ ಎಂಬುದನ್ನು ಕಂಡುಹಿಡಿಯಬೇಕು. ಆದರೆ ವೆಹಿಕಲ್ ಸುರಕ್ಷಿತವಾಗಿದೆ. ಈ ಬಗ್ಗೆ ಕಾರಣ ಹುಡುಕಿ ವಿವರವಾದ ಮಾಹಿತಿ ನೀಡುತ್ತೇವೆ ಎಂದು ಹೇಳಿದ್ದಾರೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾಗಿರುವ ಇಸ್ರೋ ಇಂದು ಗಗನಯಾನ ನೌಕೆಯ ಸುರಕ್ಷತಾ ಪ್ರಯೋಗ ನಡೆಸಲು ತಯಾರಿ ನಡೆಸಿತ್ತು.
ಬೆಳಗ್ಗೆ 8 ಗಂಟೆಗೆ ಪರೀಕ್ಷಾ ವಾಹಕದ ಉಡಾವಣೆಯಾಗಬೇಕಿತ್ತು. ಆದರೆ ಕೆಲವು ಸಮಸ್ಯೆಗಳಿಂದಾಗಿ ಉಡಾವಣೆ ಸಮಯದಲ್ಲಿ ವ್ಯತ್ಯಾಸವಾಗಿತ್ತು. ಕೊನೆಗೆ 8.45ಕ್ಕೆ ಗಗನಯಾನ ನೌಕೆಯ ಸುರಕ್ಷತಾ ಪ್ರಯೋಗ ನಡೆಸಲು ಇಸ್ರೋ ಸಮಯವನ್ನು ಶೆಡ್ಯೂಲ್ ಮಾಡಿತ್ತು. ಆದ್ರೆ ಉಡಾವಣೆಗೆ 5 ಸೆಕೆಂಡ್ಗೆ ಮುನ್ನಾ ನೌಕೆ ಉಡಾವಣೆ ಸ್ಥಗಿತಗೊಂಡಿದೆ.
ಹವಾಮಾನ ವೈಪರೀತ್ಯ, ತಾಂತ್ರಿಕ ಕಾರಣದಿಂದ ಮಾನವಸಹಿತ ಗಗನಯಾನ ಯೋಜನೆಯ ನೌಕೆ ಪ್ರಯೋಗ ಸ್ಥಗಿತಗೊಂಡಿದೆ ಎಂದು ಇಸ್ರೋ ಮುಖ್ಯಸ್ಥ ಸೋಮನಾಥ್ ಮಾಹಿತಿ ನೀಡಿದ್ದಾರೆ.