ಅಮರಾವತಿ: ಪ್ರಧಾನಿ ನರೇಂದ್ರ ಮೋದಿಯವರು ಆಂಧ್ರಪ್ರದೇಶದ ಲೇಪಾಕ್ಷಿಯ ವೀರಭದ್ರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ರಾಮಾಯಣದಲ್ಲಿ ಮಹತ್ವದ ಸ್ಥಾನ ಪಡೆದಿರುವ ಈ ದೇವಸ್ಥಾನವು ಸೀತಾ ಮಾತೆಯನ್ನು ರಾವಣ ಅಪಹರಿಸುವಾಗ ಜಟಾಯು ಇದೇ ಜಾಗದಲ್ಲಿ ಆತನನ್ನು ಬೆನ್ನಟ್ಟಿ ಹೋರಾಟ ನಡೆಸಿತ್ತು. ಬಳಿಕ ರಾವಣನ ದಾಳಿಯಿಂದ ನೆಲಕ್ಕೆ ಬಿದ್ದು ಸಾಯುವ ಸ್ಥಿತಿಯಲ್ಲಿರು ಸೀತಾ ದೇವಿಯನ್ನು ರಾವಣ ಅಪಹರಿಸಿದ ವಿಚಾರವನ್ನು ಶ್ರೀರಾಮನಿಗೆ ತಿಳಿಸಿ ಪ್ರಾಣ ಬಿಟ್ಟಿತ್ತು. ಬಳಿಕ ರಾಮ ಜಟಾಯುವಿನ ಅಂತ್ಯಕ್ರಿಯೆ ನಡೆಸಿ ಮೋಕ್ಷ ಕಲ್ಪಿಸಿದ್ದ ಎಂಬ ಪ್ರತೀತಿ ಇದೆ.
ಇನ್ನೂ ಬುಧವಾರ, ಮೋದಿಯವರು ಕೇರಳದ ಗುರುವಾಯೂರು ಮತ್ತು ತ್ರಿಪ್ರಯಾರ್ನ ಶ್ರೀ ರಾಮಸ್ವಾಮಿ ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.