ಅಮರಾವತಿ, ನ.2: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಬುಧವಾರ ಆರು ಮಹಿಳಾ ಕೃಷಿ ಕಾರ್ಮಿಕರು ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದಾರೆ.
ಬೊಮ್ಮನಹಾಳ ಮಂಡಲದ ದರ್ಗಾ ಹೊನ್ನೂರು ಗ್ರಾಮದಲ್ಲಿ ಹೊಲದಲ್ಲಿ ಕೊಯ್ಲು ಮಾಡುತ್ತಿದ್ದ ಕೃಷಿ ಕಾರ್ಮಿಕರ ಮೇಲೆ ಹೈಟೆನ್ಷನ್ ವೈರ್ ಬಿದ್ದು ಈ ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಇತರ ಕೆಲವು ಕಾರ್ಮಿಕರು ಸಹ ಗಾಯಗೊಂಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ವಿದ್ಯುತ್ ಇಲಾಖೆಯು ಈ ಪ್ರದೇಶದಲ್ಲಿ ವಿದ್ಯುತ್ ಸರಬರಾಜನ್ನು ಕಡಿತಗೊಳಿಸಿದೆ. ಘಟನೆ ಹೇಗೆ ನಡೆಯಿತು ಎಂದು ತಕ್ಷಣಕ್ಕೆ ತಿಳಿದುಬಂದಿಲ್ಲ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.