ಆಂಧ್ರಪ್ರದೇಶ: ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖಂಡರೊಬ್ಬರು ತಮ್ಮ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದಿದೆ.
ಚಂದ್ರಗಿರಿ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಟಿಡಿಪಿ ಪ್ರತಿಭಟನೆ ನಡೆಸಿದ್ದು, ಸಾವಿರಾರು ‘ನಕಲಿ’ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವಂತೆ ಒತ್ತಾಯಿಸಿತ್ತು.
ಪ್ರತಿಭಟನೆಯ ವೇಳೆ, ಟಿಡಿಪಿಯ ಚಂದ್ರಗಿರಿ ಉಸ್ತುವಾರಿ ಪುಲಿವರ್ತಿ ನಾನಿ ಮತ್ತು ಇತರ ಮುಖಂಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.
ಬಂಧನಕ್ಕೊಳಗಾದ ಬಳಿಕ ನಾನಿ ತನ್ನ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದರು, ಆದರೆ ಪೊಲೀಸ್ ಅಧಿಕಾರಿಗಳು ಸಕಾಲದಲ್ಲಿ ಮಧ್ಯಪ್ರವೇಶಿಸಿ ಪ್ರಯತ್ನವನ್ನು ವಿಫಲಗೊಳಿಸಿದರು.