ಹೈದರಾಬಾದ್: ತೆಲಂಗಾಣದ ವಾನಪ್ರತಿ ಮತ್ತು ಆಂಧ್ರದ ಶ್ರೀಕಾಕುಲಂನ ಇಬ್ಬರು ವಿದ್ಯಾರ್ಥಿಗಳು ತಮ್ಮ ವಸತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಇಬ್ಬರೂ ಎರಡು ವಾರಗಳ ಹಿಂದಷ್ಟೇ ಅಮೇರಿಕಾಗೆ ತೆರಳಿದ್ದು, ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ.
ಮೃತ ವಿದ್ಯಾರ್ಥಿಗಳನ್ನು ಜಿ. ದಿನೇಶ್ (೨೨) ಮತ್ತು ನಿಕೇಶ್ (೨೧) ಎಂದು ಗುರುತಿಸಲಾಗಿದೆ.
ದಿನೇಶ್ ಉನ್ನತ ಶಿಕ್ಷಣಕ್ಕೆಂದು ಕಳೆದ ವರ್ಷ ಡಿ. ೨೮ರಂದು ಅಮೇರಿಕಾಗೆ ಹೋಗಿದ್ದು, ನಿಕೇಶ್ ಕೆಲ ದಿನಗಳ ನಂತರ ತಲುಪಿದ್ದ. ಇಬ್ಬರಿಗೂ ಮೊದಲಿನಿಂದ ಪರಿಚಯವಿದ್ದ ಕಾರಣ ಒಟ್ಟಿಗೇ ವಾಸವಿದ್ದರು.
ದಿನೇಶ್ ನ ದೇಹವನ್ನು ಭಾರತಕ್ಕೆ ತರುವ ಬಗ್ಗೆ ಕೇಂದ್ರ ಪ್ರವಾಸೋದ್ಯಮ ಸಚಿವ ಜಿ. ಕಿಶನ್ ರೆಡ್ಡಿ ಹಾಗು ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರ ಸಹಾಯ ಕೇಳಿರುವುದಾಗಿ ದಿನೇಶ್ ನ ಪರಿವಾರದವರು ತಿಳಿಸಿದ್ದಾರೆ. ಈ ಬಗ್ಗೆ ವಾನಪರ್ತಿಯ MLA ಟಿ. ಮೇಘಾ ರೆಡ್ಡಿ ಮುಖ್ಯಮಂತ್ರಿಗಳ ಬಳಿ ಚರ್ಚಿಸಿರುವುದಾಗಿ ತಿಳಿದುಬಂದಿದೆ.
ಅವರಿಬ್ಬರೂ ಇತ್ತೀಚೆಗೆ ಅಮೇರಿಕಾಗೆ ಹೋಗಿದ್ದ ಕಾರಣ ಎರಡು ಪರಿವಾರಗಳ ನಡುವೆ ಯಾವುದೇ ಪರಿಚಯವಿಲ್ಲ
ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.
ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…
ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…
ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…