ವಿಜಯವಾಡ: ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿರುವ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಅವರು ಇಂದು ಅಧಿಕಾರ ಸ್ವೀಕರಿಸಿದರು.
ನೂತನ ರಾಜ್ಯಪಾಲರಿಗೆ ಆಂಧ್ರಪ್ರದೇಶದ ರಾಜಧಾನಿಯಾಗಿರುವ ವಿಜಯವಾಡದಲ್ಲಿರುವ ರಾಜಭವನದಲ್ಲಿ ಉಡುಪಿ ವಕೀಲರ ಸಂಘದ ವತಿಯಿಂದ ಪುಷ್ಪಗುಚ್ಚ ನೀಡಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ಬಿ. ನಾಗರಾಜ್, ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್, ಮಾಜಿ ಅಧ್ಯಕ್ಷ ಟಿ. ವಿಜಯ ಕುಮಾರ್ ಶೆಟ್ಟಿ, ಹಿರಿಯ ವಕೀಲ ಗಂಗಾಧರ್ ಎಚ್. ಎಮ್. ಉಪಸ್ಥಿತರಿದ್ದರು.