ವಿಜಯವಾಡ: ಆತ್ಮಹತ್ಯೆ ಮಾಡಿಕೊಳ್ಳಲು ಕೃಷ್ಣಾ ನದಿಗೆ ಹಾರಿದ ವ್ಯಕ್ತಿಯನ್ನು ಆಂಧ್ರಪ್ರದೇಶ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ ಡಿಆರ್ ಎಫ್) ರಕ್ಷಿಸಿದೆ.
ಇಲ್ಲಿನ ಪ್ರಕಾಶಂ ಬ್ಯಾರೇಜ್ ಬಳಿ ನದಿಗೆ ಹಾರಿದ ಆಟೋರಿಕ್ಷಾ ಚಾಲಕನನ್ನು ಎಸ್ ಡಿಆರ್ ಎಫ್ ತಂಡ ರಕ್ಷಿಸಿದೆ. ಗುಂಟೂರು ಜಿಲ್ಲೆಯ ಮಂಗಳಗಿರಿಯ ವ್ಯಕ್ತಿ ಕೌಟುಂಬಿಕ ಕಲಹದಿಂದಾಗಿ ಈ ಕೃತ್ಯ ಎಸಗಿದ್ದಾನೆ.
ಘಟನೆಯ ಬಗ್ಗೆ ತಿಳಿದು ಮಂಗಳಗಿರಿಯ ಆರನೇ ಬೆಟಾಲಿಯನ್ ನ ಎಸ್ ಡಿಆರ್ ಎಫ್ ತಂಡವು ಸ್ಥಳಕ್ಕೆ ಧಾವಿಸಿ ಆತನನ್ನು ರಕ್ಷಿಸಿತು. ನಂತರ ಎಸ್ ಡಿಆರ್ ಎಫ್ ತಂಡವು ಅವರನ್ನು ಚಿಕಿತ್ಸೆ ಮತ್ತು ಸಮಾಲೋಚನೆಗಾಗಿ ವಿಜಯವಾಡ ನಗರ ಪೊಲೀಸರ ಐ-ಟೌನ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿತು.
ಪೊಲೀಸ್ ಮಹಾನಿರ್ದೇಶಕ ಕೆ.ವಿ.ರಾಜೇಂದ್ರನಾಥ್ ರೆಡ್ಡಿ ಅವರು ಎಸ್ ಡಿಆರ್ ಎಫ್ ತಂಡದ ಸದಸ್ಯರ ಸಮಯೋಚಿತ ಪ್ರತಿಕ್ರಿಯೆ ಮತ್ತು ರಕ್ಷಣಾ ಪ್ರಯತ್ನಗಳನ್ನು ಶ್ಲಾಘಿಸಿದರು.
ಸಹಾಯವಾಣಿಗೆ ಕರೆ ಮಾಡಿ:
ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು