Categories: ದೇಶ

ಆಂಗ್ರಿ ರಾಂಟ್‌ಮ್ಯಾನ್ ಎಂದೇ ಖ್ಯಾತರಾಗಿದ್ದ ಯೂಟ್ಯೂಬರ್ ಅಬ್ರದೀಪ್ ನಿಧನ

ಮುಂಬೈ: ಸಾಮಾಜಿಕ ಮಾಧ್ಯಮಗಳಲ್ಲಿ ಆಂಗ್ರಿ ರಾಂಟ್‌ಮಾನ್ ಎಂದೇ ಜನಪ್ರಿಯವಾಗಿದ್ದ ಯೂಟ್ಯೂಬರ್ ಅಬ್ರದೀಪ್ ಸಹಾ ಅವರು 27ನೇ ವಯಸ್ಸಿಗೆ ಸಾವನ್ನಪ್ಪಿದ್ದಾರೆ. ಅವರ ಹಠಾತ್ ಸಾವು ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ದಿಗ್ಭ್ರಾಂತರನ್ನಾಗಿಸಿದೆ.

ಏಪ್ರಿಲ್ 16ರ ತಡರಾತ್ರಿ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅವರ ಕುಟುಂಬ ಸದಸ್ಯರು, ಬಂಧುಗಳು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಅವರ ಹಿಂಬಾಲಕರು ಈ ಸುದ್ದಿಯಿಂದ ಶಾಕ್‌ಗೆ ಒಳಗಾಗಿದ್ದಾರೆ.

ಅಬ್ರದೀಪ್ ಅವರು ಆಗಸ್ಟ್ 18, 2017ರಂದು ಯೂಟ್ಯೂಬ್ ಚಾನೆಲ್ ಆರಂಭಿಸಿದರು. ಅಪ್‌ಲೋಡ್‌ ಮಾಡಿದ ಮೊದಲ ವಿಡಿಯೋದಲ್ಲಿ “ನಾನು ಅನ್ನಾಬೆಲ್ಲೆ ಚಲನಚಿತ್ರವನ್ನು ಏಕೆ ನೋಡುವುದಿಲ್ಲ” ಎಂದು ವಿಡಿಯೋ ಮಾಡಿದ್ದರು. ದಿ ಕಾಂಜ್ಯೂರಿಂಗ್ ನೋಡಿದ ಬಳಿಕ ಹಾರರ್ ಸಿನಿಮಾಗಳನ್ನು ನೋಡಲು ನನಗೆ ಭಯವಾಗುತ್ತದೆ ಎಂದು ಹೇಳಿದ್ದರು.

ಆಂಗ್ರಿ ರಾಂಟ್‌ಮ್ಯಾನ್ ಕಳೆದ ತಿಂಗಳು ಪ್ರಮುಖ ಆಪರೇಷನ್ ಮಾಡಿದ್ದರಿಂದ ಆಸ್ಪತ್ರೆಯಲ್ಲಿದ್ದಾರೆ ಎಂದು ಅವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಇತ್ತೀಚಿನ ಪೋಸ್ಟ್‌ಗಳು ತಿಳಿಸಿವೆ.

ಇನ್ನು ಕೆಜಿಎಫ್‌ ಸಿನಿಮಾ ವಿಮರ್ಶೆ ಮಾಡುವ ಮೂಲಕ ಅಬ್ರದೀಪ್ ಸಹಾ ಭಾರಿ ಹೆಸರು ಮಾಡಿದ್ದರು. ಕೆಜಿಎಫ್ ಸಿನಿಮಾವನ್ನು ಹೊಗಳಿದ್ದ ಅವರು, ಬಾಲಿವುಡ್ ಸಿನಿಮಾರಂಗವನ್ನು ತರಾಟೆಗೆ ತೆಗೆದುಕೊಂಡಿದ್ದರು. ಸಿನಿಮಾ ಹೇಗೆ ಮಾಡಬೇಕು ಎಂದು ದಕ್ಷಿಣ ಭಾರತೀಯ ಚಿತ್ರರಂಗ ನೋಡಿ ಕಲಿಯಿರಿ ಎಂದು ಹೇಳಿದ್ದರು.

ಅವರ ವಿಡಿಯೋ ವ್ಯಾಪಕ ವೈರಲ್ ಆಗಿತ್ತು, ಮಾಧ್ಯಮಗಳಲ್ಲಿ ಕೂಡ ಅವರ ಬಗ್ಗೆ ವರದಿಗಳು ಬಂದಿದ್ದವು, ಅದಾದ ಬಳಿಕ ಅವರನ್ನು ಆಂಗ್ರಿ ರಾಂಟ್‌ಮಾನ್ ಎಂದೇ ಎಲ್ಲರೂ ಕರೆಯಲು ಆರಂಭಿಸಿದರು.

Ashitha S

Recent Posts

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

10 mins ago

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

31 mins ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

52 mins ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

1 hour ago

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

1 hour ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

2 hours ago