News Karnataka Kannada
Friday, May 03 2024
ದೇಶ

ಅರವಿಂದ್ ಕೇಜ್ರಿವಾಲ್ ಬಂಧನ ?; ಭೀತಿ ವ್ಯಕ್ತಪಡಿಸಿದ ಎಎಪಿ

Av
Photo Credit : News Kannada

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರೀವಾಲ್ ಅವರು 3ನೇ ಬಾರಿಯೂ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಗೈರಾಗಿರುವ ಹಿನ್ನೆಲೆಯಲ್ಲಿ ಅವರ ನಿವಾಸದ ಮೇಲೆ ಇಡಿ ದಾಳಿ ನಡೆಸಿ ಅವರನ್ನು ಬಂಧಿಸಬಹುದು ಎಂದು ಎಎಪಿ ನಾಯಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಅಬಕಾರಿ ಹಗರಣದಲ್ಲಿ ವಿಚಾರಣೆಗೆ ಬರುವಂತೆ ಜಾರಿ ನಿರ್ದೇಶನಾಲಯ ಅರವಿಂದ್ ಕೇಜ್ರಿವಾಲ್ ಅವರಿಗೆ ಒಟ್ಟು ಮೂರು ಬಾರಿ ನೋಟೀಸ್ ಕಳುಹಿಸಿತ್ತು. ಈ ನೋಟಿಸ್‌ಗೆ ಅರವಿಂದ್ ಕೇಜ್ರಿವಾಲ್ ಲಿಖಿತ ಉತ್ತರ ಕಳುಹಿಸಿದ್ದರು. ಆದರೆ ವಿಚಾರಣೆಗೆ ಹಾಜರಾಗಿರಲಿಲ್ಲ. ಆದರೆ ಈಗ 3ನೇ ಬಾರಿಯೂ ಗೈರಾದ ಹಿನ್ನೆಲೆಯಲ್ಲಿ ಅವರ ನಿವಾಸದ ಮೇಲೆ ದಾಳಿ ನಡೆಯಬಹುದು. ಅವರನ್ನು ಬಂಧಿಸಬಹುದು ಎಂದು ಎಎಪಿ ನಾಯಕರಾದ ಅತಿಶಿ, ಸೌರಭ್ ಭಾರದ್ವಾಜ್, ಜಾಸ್ಮೀನ್ ಶಾ ಮುಂತಾದವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇನ್ನು ‘ಸಿಎಂ ಮನೆಗೆ ಹೋಗುವ ರಸ್ತೆಗಳನ್ನು ಮುಚ್ಚಲಾಗಿದೆ. ಎಲ್ಲಾ ಪ್ರವೇಶ/ನಿರ್ಗಮನ ಗೇಟ್‌ಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಸಿಎಂ ಮನೆಗೆ ನಿಯೋಜಿಸಲಾದ ಸಿಬ್ಬಂದಿಯನ್ನು ಒಳಗೆ ಪ್ರವೇಶಿಸದಂತೆ ತಡೆಯಲಾಗಿದೆ’ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ.

‘ಇ.ಡಿ ಅರವಿಂದ ಕೇಜ್ರಿವಾಲ್ ಅವರ ನಿವಾಸದ ಮೇಲೆ ಬೆಳಿಗ್ಗೆ ದಾಳಿ ನಡೆಸಲಿದೆ ಎಂಬ ಸುದ್ದಿ ಬರುತ್ತಿದೆ. ಬಂಧಿಸುವ ಸಾಧ್ಯತೆಯಿದೆ’ ಎಂದು ಬುಧವಾರ ರಾತ್ರಿ ದೆಹಲಿ ಸಚಿವೆ ಮತ್ತು ಎಎಪಿ ನಾಯಕ ಅತಿಶಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು