ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಕಸ್ಟಡಿ ಅವಧಿಯನ್ನ ಮತ್ತೆ ಏಳು ದಿನಗಳವರೆಗೆ ವಿಸ್ತರಿಸುವಂತೆ ಜಾರಿ ನಿರ್ದೇಶನಾಲಯ (ಇಡಿ) ಇಂದು ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ಕೋರಿದೆ. ಆದರೆ ನ್ಯಾಯಾಲಯ ನಾಲ್ಕು ದಿನ ಇಡಿ ಕಸ್ಟಡಿಗೆ ನೀಡಿ ಆದೇಶಿಸಿದೆ.
ಕೇಜ್ರಿವಾಲ್ ಅವರನ್ನ ಇತರ ಕೆಲವು ಜನರೊಂದಿಗೆ ಎದುರಿಸಲು ಅವರ ಹೆಚ್ಚಿನ ಕಸ್ಟಡಿ ವಿಚಾರಣೆಯ ಅಗತ್ಯವಿದೆ ಎಂದು ಇಡಿ ರಿಮಾಂಡ್ ಅರ್ಜಿಯನ್ನ ಸಲ್ಲಿಸಿತು. ಇನ್ನು ಎಎಪಿ ಗೋವಾ ಅಭ್ಯರ್ಥಿಗಳ ಹೇಳಿಕೆಗಳನ್ನ ದಾಖಲಿಸಲಾಗಿದೆ ಎಂದು ಇಡಿ ತಿಳಿಸಿತ್ತು.