Categories: ದೇಶ

ಏಷ್ಯನ್ ಪೇಂಟ್ಸ್‌‌ನ “ಅಶ್ವಿನ್ ದಾಣಿ” ನಿಧನ

ಮುಂಬೈ: ಏಷ್ಯನ್ ಪೇಂಟ್ಸ್ ನಾನ್-ಎಕ್ಸಿಕ್ಯುಟಿವ್ ಡೈರೆಕ್ಟರ್ ಅಶ್ವಿನ್ ದಾಣಿ ಅವರು ಇಂದು(ಸೆ.28) ನಿಧನರಾದರು. ಅವರಿಗೆ 79 ವರ್ಷ ವಯಸ್ಸಾಗಿತ್ತು. 2021ರಲ್ಲಿ ಆಡಳಿತ ಮಂಡಳಿಯ ದೀಪಕ್ ಸತ್ವಾಳ್ಕೇಕರ್ ಅವರನ್ನು ಚೇರ್ಮನ್ ಆಗಿ ನೇಮಕ ಮಾಡಿದ ಬಳಿಕ, ದಾಣಿ ಅವರು ಕಂಪನಿಯ ನಾನ್ ಎಕ್ಸಿಕ್ಯೂಟಿವ್ ಹಾಗೂ ಪ್ರಮೋಟರ್ ಡೈರೆಕ್ಟರ್ ಆಗಿ ಮುಂದುವರಿದಿದ್ದರು.

ಭಾರತದಲ್ಲಿ ಪೇಂಟ್ಸ್ ಮಾರುಕಟ್ಟೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವಲ್ಲಿ ದಾಣಿ ಅವರು ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.

ಅಶ್ವಿನ್ ದಾಣಿ ಅವರ ನಾಯಕತ್ವದಲ್ಲಿ, ಏಷ್ಯನ್ ಪೇಂಟ್ಸ್ ತನ್ನ ಜಾಗತಿಕ ಕಾರ್ಯಾಚರಣೆಗಳನ್ನು ಗಣನೀಯವಾಗಿ ವಿಸ್ತರಿಸಿತು. ಜಾಗತಿಕ ಬಣ್ಣದ ಉದ್ಯಮದಲ್ಲಿ ಕಂಪನಿಯನ್ನು ಪ್ರಮುಖ ಸ್ಥಾನಕ್ಕೆ ಏರಿತು. ಗಮನಾರ್ಹವಾಗಿ, ಅವರು ಭಾರತದ ಮೊದಲ ಗಣಕೀಕೃತ ಬಣ್ಣ ಮಿಶ್ರಣ ಕಾರ್ಯಕ್ರಮವನ್ನು ಪರಿಚಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಅಶ್ವಿನ್ ದಾಣಿ ಅವರ ನಿಧನದ ಸುದ್ದಿಯನ್ನು ಷೇರು ಮಾರುಕಟ್ಟೆಗೆ ಮಾಹಿತಿ ನೀಡಿರುವ ಏಷ್ಯನ್ ಕಂಪನಿಯು, ಅನಾರೋಗ್ಯದಿಂದ ಬಳಲುತ್ತಿದ್ದ ದಾಣಿ ನಿಧನರಾಗಿದ್ದಾರೆ ಎಂದು ತಿಳಿಸಿದೆ.

ಅಶ್ವಿನ್ ಅವರು 1968ರಿಂದಲೂ ಕಂಪನಿಯಲ್ಲಿದ್ದರು. ಕಂಪನಿಯು ತಾಂತ್ರಿಕತೆಯಲ್ಲಿ ನೈಪುಣ್ಯತೆಯನ್ನು ಸಾಧಿಸುವುದರ ಹಿಂದಿನ ಶಕ್ತಿಯಾಗಿದ್ದರು. ಕಂಪನಿಯ ಆಡಳಿತ ಮಂಡಳಿಗೆ ಅವರು 1970ರಲ್ಲಿ ಸೇರ್ಪಡೆಯಾಗಿದ್ದರು. 1998ರಿಂದ 2009ರವರೆಗೆ ಅವರ ಕಂಪನಿಯ ವೈಸ್ ಚೇರ್ಮನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ತಿಳಿಸಿದೆ.

Ashitha S

Recent Posts

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

1 min ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

12 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

16 mins ago

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

50 mins ago

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.

1 hour ago

ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು !

ಇಲ್ಲಿನ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

1 hour ago