ಅಸ್ಸಾಂನಲ್ಲಿ ಕಳೆದ ತಿಂಗಳು ಅಂದರೆ, ಮಾರ್ಚ್ನಿಂದ ಏಪ್ರಿಲ್ 17 ರವರೆಗೆ ಸಂಭವಿಸಿದ ಪ್ರಾಕೃತಿಕ ವಿಕೋಪಗಳಿಂದ ಸುಮಾರು 20ನಾಗರೀಕರು ಸಾವನ್ನಪ್ಪಿರುವುದಾಗಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿಡಿ ತ್ರಿಪಾಠಿ ತಿಳಿಸಿದ್ದಾರೆ. ಅಸ್ಸಾಂನಲ್ಲಿ ಸಂಭವಿಸಿದ ಚಂಡಮಾರುತ ಮತ್ತು ಗುಡುಗು ಸಹಿತ ಮಳೆಗೆ ಭಾರೀ ಹಾನಿಯಾಗಿದೆ ಎಂದಿದ್ದಾರೆ.
ಮಳೆಯಿಂದಾಗಿ ಜಿಲ್ಲೆಯ 1,410 ಗ್ರಾಮಗಳಲ್ಲಿ 95,239 ಜನರು ನಿರಾಶ್ರಿತರಾಗಿದ್ದಾರೆ. 3,011 ಮನೆಗಳು ಸಂಪೂರ್ಣ ಹಾನಿಗೀಡಾಗಿವೆ. 19,256 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಒಟ್ಟು 1,333 ಹೆಕ್ಟೇರ್ ಬೆಳೆ ನಾಶವಾಗಿದೆ. ಬಿರುಗಾಳಿ ಮತ್ತು ಮಿಂಚಿನಿಂದಾಗಿ ಒಟ್ಟು 20 ಸಾವುಗಳು ಸಂಭವಿಸಿವೆ. ಈ ಪೈಕಿ ಏಪ್ರಿಲ್ನಲ್ಲಿಯೇ 19 ಸಾವುಗಳು ಸಂಭವಿಸಿವೆ ಎಂದು ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ.
ಚಂಡಮಾರುತದ ಹಾನಿಯನ್ನು ನಿರ್ಣಯಿಸಿ ಸಂತ್ರಸ್ತರಿಗೆ ತಕ್ಷಣದ ಆರ್ಥಿಕ ಸಹಾಯವನ್ನು ಸಕ್ರಿಯಗೊಳಿಸಲು ಸರ್ಕಾರದಿಂದ ಸ್ಥಾಪಿಸಲಾದ ವೃತ್ತ ಮಟ್ಟದ ಕಾರ್ಯಪಡೆ ಅಧಿಕಾರಿಗಳು ವರದಿಯ ವಿಷಯಗಳನ್ನು ಪರಿಶೀಲಿಸಿದ್ದಾರೆ. ಫಲಾನುಭವಿಗಳಿಗೆ ಪುನರ್ವಸತಿ ಅನುದಾನವನ್ನು ತ್ವರಿತವಾಗಿ ನೀಡಲು ಸರ್ಕಾರವು ಸ್ಥಳೀಯ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿದೆ. ಆದರೆ, ಹಣಕಾಸಿನ ನೆರವು ವಿತರಣೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು ಮತ್ತು ಸಂತ್ರಸ್ತರನ್ನು ನೇರವಾಗಿ ಅಥವಾ ವೈಯಕ್ತಿಕವಾಗಿ ಕರೆದು ಆರ್ಥಿಕ ನೆರವು ನೀಡಬಾರದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…
ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್ಸಿಎಲ್ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…