ಗುವಾಹಟಿ: ರಾಜ್ಯದ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಅಸ್ಸಾಂ ಮತ್ತು ಮಿಜೋರಾಂ ಗಡಿಯಲ್ಲಿ ಹಿಂಸಾಚಾರ ನಡೆದಿದೆ. ಹಿಂಸಾಚಾರದಲ್ಲಿ ಐವರು ಪೊಲೀಸರು ಹಾಗೂ ಓರ್ವ ನಾಗರೀಕ ಮೃತಪಟ್ಟಿದ್ದಾರೆ.
ಪೊಲೀಸರು, ನಾಗರೀಕರ ಸಾವಿಗೆ ಮಂಗಳವಾರ ತೀವ್ರ ಸಂತಾಪ ಸೂಚಿಸಿರುವ ಅಸ್ಸಾಂ ಸರ್ಕಾರ ರಾಜ್ಯದಾದ್ಯಂತ 3 ದಿನಗಳ ಶೋಕಾಚರಣೆ ಘೋಷಣೆ ಮಾಡಿದೆ.
ಅಸ್ಸಾಂ ಸರ್ಕಾರ 3 ದಿನಗಳ ಶೋಕಾಚರಣೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ, ಈ ಅವಧಿಯಲ್ಲಿ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯಮಿತವಾಗಿ ಹಾರಿಸಲಾಗುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಲಾಗಿದೆ.
ಅಸ್ಸಾಂ ಮತ್ತು ಮಿಜೋರಾಂ ನಡುವಣ ಗಡಿ ಸಂಘರ್ಷದ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಅಸ್ಸಾಂನ ಆರು ಮಂದಿ ಪೊಲೀಸರು ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 60ಕ್ಕಿಂತಲೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಘಟನೆ ಸಂಬಂಧ ಗೃಹ ಸಚಿವ ಅಮಿತ್ ಶಾ ಅವರು ಉಭಯ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ್ದು, ಶಾಂತಿ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.