ಅಸ್ಸಾಂ ರಾಜ್ಯ ಸರ್ಕಾರದಿಂದ ಉದ್ಯಮಿ ರತನ್ ಟಾಟಾಗೆ ರಾಜ್ಯದ ಉನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.
ಅಸ್ಸಾಂನಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ನಿರ್ಮಿಸಲು ಟಾಟಾ ಟ್ರಸ್ಟ್ ನೀಡಿದ ಕೊಡುಗೆಯನ್ನು ಗಮನಿಸಿ ಅಸ್ಸಾಂ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿರುವ ‘ಅಸ್ಸಾಂ ಭೈಭವ್’ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಟಾಟಾ ಟ್ರಸ್ಟ್ ಸಹಯೋಗದಲ್ಲಿ ಅಸ್ಸಾಂ ಸರ್ಕಾರ ರಾಜ್ಯದಲ್ಲಿ 19 ಕ್ಯಾನ್ಸರ್ ಕೇರ್ ಘಟಕಗಳನ್ನು ಸ್ಥಾಪಿಸುತ್ತಿವೆ. ಇದಕ್ಕೆ 1400 ಕೋಟಿ ರೂ. ವೆಚ್ಚವಾಗಲಿದೆ. 2017ರಲ್ಲಿ ಟಾಟಾ ಸಂಸ್ಥೆಯ ಟ್ರಸ್ಟ್ ಅಸ್ಸಾಂ ನ ಕ್ಯಾನ್ಸರ್ ಚಿಕಿತ್ಸೆಗಾಗಿ 540 ಕೋಟಿ ರೂ. ಗಳನ್ನು ಅನುಮೋದಿಸಿತ್ತು.
‘ಅಸ್ಸಾಂ ರತ್ನ’ ಎಂದು ಕರೆಯಲಾಗುತ್ತಿದ್ದ ಪ್ರಶಸ್ತಿಯನ್ನು ಈಗ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರ ನೇತೃತ್ವದ ಸರ್ಕಾರ ‘ಅಸ್ಸಾಂ ಭೈಭವ್’ ಎಂದು ಮರುನಾಮಕರಣ ಮಾಡಿದೆ.