Categories: ಅಸ್ಸಾಂ

ಮನೋಹರಿ ಚಹಾ ಪುಡಿ ಒಂದು ಕೆ.ಜಿ.ಗೆ ಬರೋಬ್ಬರಿ 99,999 ರೂಪಾಯಿಗೆ ಮಾರಾಟ !

ಗುವಾಹಟಿ: ಅಸ್ಸೋಂನ ಪ್ರಸಿದ್ಧ, ಅಪರೂಪದ ಮತ್ತು ಸ್ವಾದಭರಿತ ಚಹಾ ಪುಡಿಯಾದ ‘ಮನೋಹರಿ ಗೋಲ್ಡ್​ ಟೀ’ ಈ ಬಾರಿ ದಾಖಲೆ ಪ್ರಮಾಣದಲ್ಲಿ ಮಾರಾಟ ಕಾಣುವ ಮೂಲಕ ತನ್ನದೇ ದಾಖಲೆ ಅಳಿಸಿ ಹಾಕಿದೆ.

ಗುವಾಹಟಿ ಟೀ ಮಾರಾಟ ಕೇಂದ್ರದಲ್ಲಿ ನಡೆದ ಹರಾಜಿನಲ್ಲಿ ಮನೋಹರಿ ಚಹಾ ಪುಡಿ ಒಂದು ಕೆ.ಜಿ.ಗೆ ಬರೋಬ್ಬರಿ 99,999 ರೂಪಾಯಿಗೆ ಮಾರಾಟವಾಗಿದ್ದು, ಇತಿಹಾಸ ಸೃಷ್ಟಿಸಿದೆ. ಸೌರವ್​ ಟೀ ಟ್ರೇಡಸ್​ ಕಂಪನಿ ಗೋಲ್ಟ್​ ಟೀ ಪೌಡರನ್ನು ಇಷ್ಟು ಪ್ರಮಾಣದ ಬಿಡ್​ ಹೂಡಿ ಖರೀದಿ ಮಾಡಿದೆ.

ಹಿಂದಿನ ವರ್ಷ ಕಂಟೆಂಪರರಿ ಬ್ರೋಕರ್ಸ್ ಪ್ರೈವೇಟ್ ಲಿಮಿಟೆಡ್​ನಿಂದ ಹರಾಜಿಗಿಟ್ಟಿದ್ದ ಇದೇ ಮನೋಹರಿ ಗೋಲ್ಡ್​ ಟೀ ಪ್ರತಿ ಕಿಲೋಗೆ 75 ಸಾವಿರ ರೂಪಾಯಿ ಮಾರಾಟವಾಗಿ ದಾಖಲೆ ಬರೆದಿತ್ತು. ಇದೀಗ ಮತ್ತೆ 99,999 ರೂಪಾಯಿಗೆ ಮಾರಾಟವಾಗಿ ತನ್ನದೇ ದಾಖಲೆಯನ್ನು ಮುರಿದಿದೆ.

ಈ ಚಹಾಪುಡಿ ವಿಶೇಷತೆ ಏನು?

ಈ ಚಹಾಪುಡಿ ಬಹಳ ವಿಶೇಷವಾಗಿದ್ದು, ಇದನ್ನು ಅತ್ಯುತ್ತಮವಾದ ಮತ್ತು ಎಳೆಯ ಪಕಳೆಗಳಿಂದ ತಯಾರು ಮಾಡಲಾಗುತ್ತದೆ. ಈ ಮಾದರಿಯ ಟೀ ಪುಡಿಯ ಎಲೆಗಳು ಬೆಳಗಿನ ಜಾವದಲ್ಲಿ ಮಾತ್ರ ಹೆಕ್ಕಲು ಸಿಗುತ್ತವೆ. ಇದರಿಂದಾಗಿ ಗೋಲ್ಡ್​ ಟೀ ಭಾರೀ ಮಹತ್ವ ಪಡೆದುಕೊಂಡಿದೆ.

ಇದೀಗ ಮನೋಹರಿ ಗೋಲ್ಡ್​ ಟೀ ಪೌಡರ್​ ಅನ್ನು ಗುವಾಹಟಿ ಮೂಲದ ಚಹಾ ವ್ಯಾಪಾರಿ ವಿಷ್ಣು ಟೀ ಕಂಪನಿ ಖರೀದಿಸಿದ್ದು, ಅದನ್ನು ತಮ್ಮ ವೆಬ್‌ಸೈಟ್ 9amtea.com ನಲ್ಲಿ ಪ್ರಪಂಚದಾದ್ಯಂತ ಮಾರಾಟಕ್ಕಿಟ್ಟಿದೆ.

Sneha Gowda

Recent Posts

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

6 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

12 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

25 mins ago

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

43 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

54 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

1 hour ago