ಗೌಹಾತಿ ; ಇಲ್ಲಿಗೆ ಸಮೀಪದ ಚರೈಡಿಯೊ ಜಿಲ್ಲೆಯಲ್ಲಿ 5 ವರ್ಷದ ಪುಟ್ಟ ಬಾಲಕಿಯನ್ನು ಬಲಿ ನೀಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಮಂತ್ರವಾದಿಯೊಬ್ಬನನ್ನು ಪೋಲೀಸರು ಬಂಧಿಸಿದ್ದಾರೆ. ತನ್ನ ಮನೆಯಲ್ಲಿ 5 ಜನ ಸಹೋದರ-ಸಹೋದರಿಯರ ನಡುವೆ ನೆಮ್ಮದಿಯಾಗಿ ಮಲಗಿದ್ದ ಪುಟ್ಟ ಬಾಲಕಿಯನ್ನು ಸೋಮವಾರ ನಡುರಾತ್ರಿಯಲ್ಲಿ ಯಾರೋ ಅಪಹರಿಸಿದ್ದಾರೆ. ಮರುದಿನ ಬೆಳಗ್ಗೆ ಬಾಲಕಿ ಕಾಣೆಯಾದಾಗ ಆಕೆಯ ಅಕ್ಕ ಸೆಫ್ರಾಯಿ ಪೋಲೀಸ್ ಠಾಣೆಯಲ್ಲಿ ಈ ಸಂಬಂಧ ಮಂಗಳವಾರ ದೂರು ನೀಡಿದ್ದಳು. ಅದೇ ದಿನ (ಮಂಗಳವಾರ) ರಾತ್ರಿ ಸಿಂಗ್ಲು ನದಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಕೆಂಪು ಬಟ್ಟೆಯಲ್ಲಿ ಭಸ್ಮ ಸೇರಿದಂತೆ ಮಂತ್ರವಾದಿಗಳು ಬಳಸುವ ಕೆಲವು ವಸ್ತುಗಳು ನದಿ ದಂಡೆಯಲ್ಲಿ ಪತ್ತೆಯಾಗಿವೆ. ಆದ್ದರಿಂದ ಇದು ನರಬಲಿಯ ಪ್ರಕರಣ ಇರಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಸದ್ಯ ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಂತ್ರವಾದಿಯನ್ನು ಬಂಧಿಸಲಾಗಿದ್ದು, ನರಬಲಿ ಮತ್ತು ಅದಕ್ಕೆ ಸಂಬಂಧಿಸಿದ ಕೆಲಸಗಳನ್ನು ಮಾಡಿರಬಹುದಾದ ಮತ್ತೊಬ್ಬ ಹಿರಿಯ ಮಂತ್ರವಾದಿಯನ್ನು ಹುಡುಕುತ್ತಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಬಾಲಕಿಯ ತಂದೆ ತಾಯಿಯನ್ನು ಈಗಾಗಲೇ ಪ್ರಶ್ನಿಸಿರುವ ಪೋಲೀಸರು ತಂದೆ ಮತ್ತು ಇನ್ನಿತರ 10 ಜನರನ್ನು ಮತ್ತಷ್ಟು ಹೆಚ್ಚಿನ ವಿಚಾರಣೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.