ಗುವಾಹಟಿ: ಅಸ್ಸಾಂ ಪೊಲೀಸರು ಮತ್ತು ಗಡಿ ಭದ್ರತಾ ಪಡೆ (ಬಿಎಸ್ಎಫ್) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 4 ಕೋಟಿ ರೂಪಾಯಿ ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಖಚಿತ ಮಾಹಿತಿಯ ಆಧಾರದ ಮೇಲೆ ಗುರುವಾರ ಕಾಯಸ್ಥಗ್ರಾಮ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಐಎಎನ್ಎಸ್ಗೆ ತಿಳಿಸಿದ್ದಾರೆ.
ತ್ರಿಪುರಾ ಗಡಿಯ ಕಡೆಗೆ ಹೋಗುತ್ತಿದ್ದ ವಾಹನವನ್ನು ಭದ್ರತಾ ಸಿಬ್ಬಂದಿ ತಡೆದು ಕೂಲಂಕಷವಾಗಿ ಪರಿಶೀಲಿಸಿದಾಗ, ಮಾದಕವಸ್ತುಗಳನ್ನು ಸಾಬೂನು ಪೆಟ್ಟಿಗೆಗಳಲ್ಲಿ ಅಡಗಿಸಿಟ್ಟಿರುವುದು ಕಂಡುಬಂದಿದೆ.
“ನಾವು 50 ಸಾಬೂನು ಪೆಟ್ಟಿಗೆಗಳಲ್ಲಿ ಅಡಗಿಸಿಟ್ಟಿದ್ದ 768 ಗ್ರಾಂ ಮಾದಕವಸ್ತುಗಳನ್ನು ಪತ್ತೆ ಮಾಡಿದ್ದೇವೆ. ವಶಪಡಿಸಿಕೊಂಡ ಮಾದಕವಸ್ತುಗಳ ಅಂದಾಜು ಮೌಲ್ಯ ಸುಮಾರು 4 ಕೋಟಿ ರೂ. ಆಗಿರುತ್ತದೆ. ವಾಹನ ಚಲಾಯಿಸುತ್ತಿದ್ದ ಶಿಫರ್ ಉದ್ದೀನ್ ಎಂಬಾತನನ್ನು ಮಾದಕ ದ್ರವ್ಯ ಮಾರಾಟದ ಆರೋಪದ ಮೇಲೆ ಬಂಧಿಸಲಾಗಿದೆ.
ಭದ್ರತಾ ಸಿಬ್ಬಂದಿಯ ಈ ಕಾರ್ಯವನ್ನು ಶ್ಲಾಘಿಸಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, “ಕರೀಂಗಂಜ್ ಪೊಲೀಸರು ಮತ್ತು ಬಿಎಸ್ಎಫ್ ಜಂಟಿಯಾಗಿ ಕಾಯಸ್ಥ ಗ್ರಾಮ ಬಜಾರ್ನಲ್ಲಿ ವಾಹನವನ್ನು ತಡೆದು 768 ಗ್ರಾಂ ಹೆರಾಯಿನ್ ಹೊಂದಿರುವ 50 ಸಾಬೂನು ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ. ಒಬ್ಬ ಆರೋಪಿಯನ್ನು ಸಹ ಬಂಧಿಸಲಾಯಿತು. ಇದು ಅತ್ಯುತ್ತಮ ಕೆಲಸ. ಹೀಗಿಯೇ ಇನ್ನಷ್ಟು ಪ್ರಕರಣಗಳನ್ನು ಭೇದಿಸಿ ಎಂದು ಶ್ಲಾಘಿಸಿದ್ದಾರೆ.
ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ದಾಖಲಾಗಿದೆ.ಶಾಸಕರು ತನ್ನ…
ಕಾರು ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್ ಮಾಡಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಬ್ಯಾಂಕ್ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…
ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…