Categories: ಅಸ್ಸಾಂ

ಪತ್ನಿಗೆ ಸೀಟು ಸಿಗಲಿಲ್ಲ ಎಂಬ ಕಾರಣಕ್ಕೆ ಪಕ್ಷಕ್ಕೆ ಪತಿ ರಾಜಿನಾಮೆ

ಅಸ್ಸಾಂ: ಲೋಕಸಭಾ ಚುನಾವಣೆ ಹಿನ್ನಲೆ ಚುನಾವಣೆ ಸಿದ್ಧತೆ ಭರ್ಜರಿಯಾಗಿ ನಡೆಯುತ್ತಿದ್ದು ಅದರಲ್ಲೂ ಅಭ್ಯರ್ಥಿಗಳ ಆಯ್ಕೆಯಲ್ಲಿ ಒಂದಲ್ಲಾ ಒಂದು ರೀತಿಯ ವಿಚಿತ್ರ ಸುದ್ದಿಗಳು ಕೇಳಿಬರುತ್ತಿವೆ. ಬಹುತೇಕರು ತಮ್ಮ ಕುಟುಂಬದವರಿಗೆ ಟಿಕೇಟ್‌ ಕೊಡಿಸಬೇಕು ಎಂದು ಒದ್ದಾಡುತ್ತಿದ್ದಾರೆ. ಇದೀಗ ಅಸ್ಸಾಂ ಲಖಿಂಪುರ ಜಿಲ್ಲೆಯ ನೌಬೋಯಿಜಾನ ಕಾಂಗ್ರೆಸ್​ ಶಾಸಕರೊಬ್ಬರು ಪತ್ನಿಗೆ ಸೀಟು ಸಿಕ್ಕಿವೆಂದು ಪಕ್ಷಕ್ಕೆ ರಾಜೀನಾಮೆ ನೀಡಿದ ಘಟನೆ ಬೆಳಕಿಗೆ ಬಂದಿದೆ.

ಶಾಸಕ ಭರತ್​ ಚಂದ್ರ ನಾರಾ ತನ್ನ ಪತ್ನಿ ರಾಣಿ ನಾರಾಗೆ ಕಾಂಗ್ರೆಸ್​ ಪಕ್ಷ ಲೋಕಸಭಾ ಚುನಾವಣೆಗೆ ಸೀಟು ನೀಡಲ್ಲ ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ.ರಾಣಿ ನಾರಾ ಮಾಜಿ ಕೇಂದ್ರ ಸಚಿವೆಯಾಗಿದ್ದು, ಪತಿ ಭರತ್​ ಚಂದ್ರ ನಾರಾ ಈ ಬಾರಿ ಅವರಿಗೆ ಸೀಟು ಸಿಗಲಿದೆ ಎಂಬ ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು. ಆದರೆ ಸೀಟು ವಂಚಿತರಾದ ಬಳಿಕ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ. ಅದರಲ್ಲಿ ‘ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​ಗೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಹೇಳಿದ್ದಾರೆ.
ಲಖಿಂಪುರ ಲೋಕಸಭಾ ಕ್ಷೇತ್ರಕ್ಕೆ ಉದಯ್​ ಶಂಕರ್​ ಹಜಾರಿಕಾ ಅವರನ್ನು ಕಾಂಗ್ರೆಸ್​ ಪಕ್ಷ ಆಯ್ಕೆ ಮಾಡಿದ 2 ದಿನಗಳ ನಂತರ ಭರತ್​ ಚಂದ್ರ ನಾರಾ ರಾಜೀನಾಮೆ ನೀಡಿದ್ದಾರೆ.

Nisarga K

Recent Posts

ಬಸ್ ಹತ್ತುವಾಗ ಆಯಾತಪ್ಪಿ ಬಿದ್ದ ಮಹಿಳೆ : ಚಕ್ರಕ್ಕೆ ಸಿಲುಕಿ ಸಾವು

ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…

13 mins ago

ಉಳುಮೆ ವೇಳೆ ಟ್ರ‍್ಯಾಕ್ಟರ್ ಗೆ ಸಿಲುಕಿ 8 ವರ್ಷದ ಬಾಲಕ ಸಾವು

ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್‌ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.

19 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…

34 mins ago

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

50 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

1 hour ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

1 hour ago