ಅಸ್ಸಾಂ: ಪ್ರಧಾನಿ ಮೋದಿ ಅವರು ಇಂದು(ಮಾ.9) ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ಅಸ್ಸಾಂ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.
ಇಂದು ಬೆಳ್ಳಂಬೆಳಗ್ಗೆಯೇ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡುವ ಮೂಲಕ ಅವರ ಪ್ರವಾಸವು ಪ್ರಾರಂಭವಾಗಿದೆ.
ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಮತ್ತು ಹುಲಿ ಸಂರಕ್ಷಿತ ಪ್ರದೇಶದಲ್ಲಿ ಆನೆ ಮತ್ತು ಜೀಪು ಸಫಾರಿಯಲ್ಲಿ ಮೋದಿಯವರು ಸಾಗಿದರು.
ಯುನೆಸ್ಕೋ ವಿಶ್ವ ಪರಂಪರೆಯ ತಾಣಕ್ಕೆ ಇಂದು ಮೊದಲ ಬಾರಿ ಭೇಟಿ ನೀಡಿದ ಮೋದಿ, ಆರಂಭದಲ್ಲಿ ಉದ್ಯಾನವನದ ಸೆಂಟ್ರಲ್ ಕೊಹೊರಾ ಶ್ರೇಣಿಯ ಮಿಹಿಮುಖ್ ಪ್ರದೇಶದಲ್ಲಿ ಆನೆ ಸಫಾರಿಯನ್ನು ಕೈಗೊಂಡರು, ನಂತರ ಅದೇ ವ್ಯಾಪ್ತಿಯಲ್ಲಿ ಜೀಪ್ ಸಫಾರಿ ನಡೆಸಿದರು. ಉದ್ಯಾನದ ನಿರ್ದೇಶಕಿ ಸೋನಾಲಿ ಘೋಷ್ ಮತ್ತು ಇತರ ಹಿರಿಯ ಅರಣ್ಯ ಅಧಿಕಾರಿಗಳು ಪ್ರಧಾನಿ ಜೊತೆಗಿದ್ದರು.
ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…
ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…
ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…
ಅನಾಥ ಬುದ್ಧಿಮಾಂದ್ಯ ಹುಡುಗನನ್ನು ರಕ್ಷಣೆ ಮಾಡಿ ಶಕ್ತಿ ಅನಾಥಾಶ್ರಮಕ್ಕೆ ಸೇರಿಸಿರುವ ಘಟನೆಯೊಂದು ಮಡಿಕೇರಿಯಲ್ಲಿ ನಡೆದಿದೆ.
ಗ್ರಾಹಕರ ಸೋಗಿನಲ್ಲಿ ಬಂದು ಬಂಗಾರದ ಖಡ್ಗ ಕದ್ದು ಪರಾರಿಯಾದ ಘಟನೆ ಕಲಬುರಗಿ ನಗರದ ಅನ್ನಪೂರ್ಣ ಕ್ರಾಸ್ನಲ್ಲಿರುವ ತನಿಷ್ಕ ಜ್ಯುವೆಲ್ಲರಿ ಶಾಪ್ನಲ್ಲಿ…
ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.