News Karnataka Kannada
Thursday, May 02 2024
ಅಸ್ಸಾಂ

ಗುಡ್‌ ನ್ಯೂಸ್‌ : ಕೇವಲ 150 ರೂ.ಗೆ ವಿಮಾನದಲ್ಲಿ ಪ್ರಯಾಣಿಸುವ ಅವಕಾಶ

ಕೇಂದ್ರ ಸರ್ಕಾರದ ಉಡಾನ್ (ಉಡೇ ದೇಶ್ ಕಾ ಆಮ್ ನಾಗರಿಕ್) ಯೋಜನೆಯು ಪ್ರಾದೇಶಿಕ ಸಂಪರ್ಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗೆ ಕಾರಣವಾಗಿದೆ.
Photo Credit : NewsKarnataka

ಅಸ್ಸಾಂ:  ಕೇಂದ್ರ ಸರ್ಕಾರದ ಉಡಾನ್ (ಉಡೇ ದೇಶ್ ಕಾ ಆಮ್ ನಾಗರಿಕ್) ಯೋಜನೆಯು ಪ್ರಾದೇಶಿಕ ಸಂಪರ್ಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗೆ ಕಾರಣವಾಗಿದೆ. ಕ್ಟೋಬರ್ 21, 2016 ರಂದು ನಾಗರಿಕ ವಿಮಾನಯಾನ ಸಚಿವಾಲಯವು ಪ್ರಾರಂಭಿಸಿರುವ ಉಡಾನ್ ಯೋಜನೆಯು ಸಬ್ಸಿಡಿ ಮೂಲಕ ಪ್ರತಿಯೊಬ್ಬ ನಾಗರಿಕರಿಗೂ ವಿಮಾನಯಾನ ಒದಗಿಸುವ ಗುರಿಯನ್ನು ಹೊಂದಿದೆ.

ಪ್ರವಾಸೋದ್ಯಮವನ್ನು ಉತ್ತೇಜಿಸುವಲ್ಲಿ ಮತ್ತು ಪ್ರಯಾಣಿಕರಿಗೆ ಸುಲಭವಾದ ಸಾರಿಗೆಯನ್ನು ಒದಗಿಸುವ ಮೂಲಕ ವಿವಿಧ ಪ್ರದೇಶಗಳಲ್ಲಿ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವಲ್ಲಿ ಇದು ಸಹಕಾರಿಯಾಗಲಿದೆ ಎನ್ನಲಾಗಿದೆ.

ಅಸ್ಸಾಂನ ಲೀಲಾಬಾರಿ ಮತ್ತು ತೇಜ್‌ಪುರ ನಡುವಿನ ಮಾರ್ಗದಲ್ಲಿ ಅಲಯನ್ಸ್ ಏರ್ ಕಂಪನಿಯು ಕೇವಲ 150 ರೂ. ಕ್ಕೆ ಪ್ರಯಾಣದ ಆಫರ್ ನೀಡುತ್ತಿದ್ದು, 50 ನಿಮಿಷಗಳ 147 ಕಿ.ಮೀ ಪ್ರಯಾಣವನ್ನು ಕೇವಲ 150 ರೂ. ಗಳಲ್ಲಿ ಪೂರೈಸಬಹುದಾಗಿದೆ. ಜೊತೆಗೆ ದೇಶದ ಪ್ರಮುಖ 22 ಮಾರ್ಗಗಳಲ್ಲಿ ರೂ. 1 ಸಾವಿರಕ್ಕಿಂತಲೂ ಕಡಿಮೆ ಮೂಲ ದರದಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದ್ದು, ಇವು ದೇಶದೊಳಗೆ ವಿವಿಧ ಸ್ಥಳಗಳನ್ನು ಅನ್ವೇಷಿಸಲು ಬಯಸುವ ಪ್ರಯಾಣಿಕರಿಗೆ ವಿಮಾನ ಪ್ರಯಾಣವನ್ನು ಹೆಚ್ಚು ಸುಲಭ ಮತ್ತು ಅನುಕೂಲಕರವಾಗಿಸಲಿವೆ ಎನ್ನಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು