ನವದೆಹಲಿ: ಪ್ರಾಥಮಿಕ ಶಾಲೆಯ ಶಿಕ್ಷಕರಾಗುವವರು ಬಿಎಡ್ ಅರ್ಹತೆ ಹೊಂದಿರಬೇಕು ಎಂಬ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಪ್ರಾಥಮಿಕ ಶಾಲೆ ಶಿಕ್ಷಕರಾಗಲು ಬಿಎಡ್ ಅರ್ಹತೆ ನಿಗದಿ ಮಾಡಿ ಸರ್ಕಾರ ಸಂವಿಧಾನ ಮತ್ತು ಕಾನೂನುಗಳನ್ನು ಉಲ್ಲಂಘಿಸಿದೆ.
ಶಿಕ್ಷಕರಿಗೆ ಸಂಬಂಧಿಸಿದ ಬೋಧನಾ ಕೌಶಲ ಅತ್ಯಂತ ಮಹತ್ವದಾಗಿದೆ. ಪ್ರಾಥಮಿಕ ಶಾಲೆಯಲ್ಲಿ ಬೋಧಿಸಲು ಡಿಎಡ್ ಅರ್ಹತೆಯೇ ಹೊರತೂ ಬಿಎಡ್ ಅಲ್ಲ ಎಂದು ಸುಪ್ರೀಂ ಕೋರ್ಟ್ ಹಲವು ಬಾರಿ ಹೇಳಿರುವುದಾಗಿ ಎಂದು ನ್ಯಾಯಮೂರ್ತಿಗಳಾದ ಅನಿರುದ್ಧ್ ಬೊಸ್ ಮತ್ತು ಸುಧಾಂಶು ಧುಲಿಯಾ ಅವರಿದ್ದ ನ್ಯಾಯಪೀಠ ತಿಳಿಸಿದೆ.
ಬಿಎಡ್ ಕಡ್ಡಾಯ ಅಧಿಸೂಚನೆ ರದ್ದು ಮಾಡಿದ ಸುಪ್ರೀಂ ಕೋರ್ಟ್, ಸರ್ಕಾರದ ನಿರ್ಧಾರ ಸ್ವೇಚ್ಛೆಯಿಂದ ಕೂಡಿದೆ. ಅದು ಅತಾರ್ಕಿಕವಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಶಿಕ್ಷಣ ಹಕ್ಕು ಕಾಯ್ದೆಗೂ ಸರ್ಕಾರದ ನಿರ್ಧಾರಕ್ಕೂ ಸಂಬಂಧವಿಲ್ಲ. ಪ್ರಾಥಮಿಕ ಶಾಲೆ ಶಿಕ್ಷಕರಾಗಲು ಅರ್ಹತೆಯಾಗಿ ಬಿಎಡ್ ನಿಗದಿ ಮಾಡಬೇಕು ಎಂದು ಬೋಧನಾ ಶಿಕ್ಷಣ ರಾಷ್ಟ್ರೀಯ ಪರಿಷತ್ 2018ರ ಜೂನ್ 28ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ.
ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.