ನವದೆಹಲಿ: ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಂತಾಗಿದ್ದು, ಸಂಸದ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ.
ಹೀಗಾಗಿ ಅನರ್ಹತೆ ಆದೇಶದಿಂದ ಪ್ರಜ್ವಲ್ ಪಾರಾಗಿದ್ದಾರೆ. ಪ್ರಜ್ವಲ್ ರೇವಣ್ಣ ಚುನಾವಣಾ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನ ಸಿಜೆಐ ಪೀಠದಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಪ್ರಜ್ವಲ್ ರೇವಣ್ಣಾಗೆ ಸಂಸತ್ ಕಲಾಪಕ್ಕೆ ಭಾಗಿಯಾಗಲು ಸುಪ್ರೀಂ ಅವಕಾಶ ನೀಡಿದೆ. ಜೊತೆಗೆ ಮುಂದಿನ ಲೋಕಸಭಾ ಚುನಾವಣೆಗೂ ಸ್ಫರ್ಧೆಗೆ ಅವಕಾಶ ನೀಡಲಾಗಿದೆ. ಆದರೆ ಸಂಸತ್ ಭತ್ಯೆ ಬಳಸಲು ಸುಪ್ರಿಂ ಕೋರ್ಟ್ ಅನುಮಾತಿ ನೀಡಿಲ್ಲ.