ಬಿಹಾರ : ಇಲ್ಲಿನ ಅರಾರಿಯಾ ಜಿಲ್ಲೆಯ ಪೋಕ್ಸೊ ನ್ಯಾಯಾಲಯ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯೊಬ್ಬನಿಗೆ ಕೇವಲ ಒಂದು ದಿನದ ವಿಚಾರಣೆಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ.
ಈ ತೀರ್ಪನ್ನು ದೇಶದ ಯಾವುದೇ POCSO(ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ನ್ಯಾಯಾಲಯವು ಅತ್ಯಂತ ವೇಗವಾಗಿ ನೀಡಿದ ತೀರ್ಪು ಎಂದು ಪರಿಗಣಿಸಲಾಗಿದೆ.
ಪೋಕ್ಸೊ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಶಶಿಕಾಂತ ರೈ ಅವರು ಅಪರಾಧಿಗೆ 50,000 ರೂಪಾಯಿ ದಂಡ ವಿಧಿಸಿದ್ದು, ಸಂತ್ರಸ್ತೆಗೆ 7 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸೂಚಿಸಿದ್ದಾರೆ.
ಅಕ್ಟೋಬರ್ 4 ರಂದು ಆದೇಶವನ್ನು ನೀಡಲಾಗಿದ್ದರೂ, ಪ್ರಕರಣಕ್ಕೆ ಸಂಬಂಧಿಸಿದ ಆರ್ಡರ್ ಶೀಟ್ ನವೆಂಬರ್ 26 ರಂದು ಲಭ್ಯವಾಗಿದೆ. ಈ ವರ್ಷ ಜುಲೈ 22 ರಂದು ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು, ಮರುದಿನ ಎಫ್ಐಆರ್ ದಾಖಲಿಸಲಾಗಿದೆ. ಅರಾರಿಯಾ ಮಹಿಳಾ ಪೊಲೀಸ್ ಠಾಣೆಯ ಪ್ರಭಾರಿ ರೀಟಾ ಕುಮಾರಿ ಪ್ರಕರಣದ ಮೇಲ್ವಿಚಾರಣೆ ನಡೆಸಿದ್ದರು.
ಸುದ್ದಿಗಾರರೊಂದಿಗೆ ಮಾತನಾಡಿದ ಪೋಸ್ಕೋ ಪಬ್ಲಿಕ್ ಪ್ರಾಸಿಕ್ಯೂಟರ್ ಶ್ಯಾಮಲಾಲ್ ಯಾದವ್ ಅವರು, ಅರಾರಿಯಾದಲ್ಲಿ ನಡೆದ ಪ್ರಕರಣ ದೇಶದಲ್ಲಿ ನಡೆದ ಅತ್ಯಾಚಾರ ಪ್ರಕರಣದ ಅತ್ಯಂತ ತ್ವರಿತ ವಿಚಾರಣೆಯಾಗಿದೆ. ಇದು ಮಧ್ಯಪ್ರದೇಶದ ದಾತಿಯಾ ಜಿಲ್ಲೆಯ ನ್ಯಾಯಾಲಯದ ದಾಖಲೆಯನ್ನು(ಮೂರು ದಿನಗಳಲ್ಲಿ) ಹಿಂದಿಕ್ಕಿದೆ ಎಂದು ಹೇಳಿದ್ದಾರೆ.
ವಾದಗಳು ಮತ್ತು ಪ್ರತಿವಾದಗಳನ್ನು ದಾಖಲಿಸುವ ಮೂಲಕ ನ್ಯಾಯಾಲಯ ಪ್ರಕ್ರಿಯೆಗಳನ್ನು ತ್ವರಿತವಾಗಿ ಟ್ರ್ಯಾಕ್ ಮಾಡಿ ಆರೋಪಿಗೆ ಶಿಕ್ಷೆ ವಿಧಿಸಿ, ಕೇವಲ ಒಂದೇ ದಿನದಲ್ಲಿ ತೀರ್ಪು ಪ್ರಕಟಿಸಿದೆ.
ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಬಿಹಾರ ಸರ್ಕಾರದ ಗೃಹ ಇಲಾಖೆಯ ಪ್ರಾಸಿಕ್ಯೂಷನ್ ನಿರ್ದೇಶನಾಲಯ ಹೇಳಿಕೆ ನೀಡಿದ್ದು, ದೇಶದಲ್ಲಿ ಒಂದೇ ದಿನದ ವಿಚಾರಣೆಯಲ್ಲಿ ಶಿಕ್ಷೆಯನ್ನು ನೀಡಿದ ಮೊದಲ ಪ್ರಕರಣ ಇದಾಗಿದೆ ಎಂದು ಹೇಳಿದೆ.
ಇದಕ್ಕೂ ಮೊದಲು, ದತಿಯಾ(MP) ಜಿಲ್ಲೆಯಲ್ಲಿ, ನ್ಯಾಯಾಲಯವು 8 ಆಗಸ್ಟ್ 2018 ರಂದು ಮೂರು ದಿನಗಳ ವಿಚಾರಣೆಯ ನಂತರ ತೀರ್ಪು ನೀಡಿತು. ಬಿಹಾರ ಇದೀಗ ಅಪರಾಧಿಗೆ ಜೀವಾವಧಿ ಶಿಕ್ಷೆಯನ್ನು ನೀಡುವ ಮೂಲಕ ಒಂದೇ ದಿನದಲ್ಲಿ ವಿಚಾರಣೆ ನಡೆಸುವ ಮೂಲಕ ರಾಷ್ಟ್ರೀಯ ದಾಖಲೆ ಮಾಡಿದೆ ಎಂದು ಹೇಳಲಾಗಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…