ಮೃತ ದೇಹವನ್ನು ಸುಭಾಷ್ ಹಲವಾರು ತುಂಡುಗಳಾಗಿ ಕತ್ತರಿಸಿದ್ದಾನೆ. ಸುಭಾಷ್ ಮತ್ತು ರಾಧಾ ಬಾಡಿಗೆ ಫ್ಲಾಟ್ ಒಳಗೆ ಶವವನ್ನು ವಾಸನೆ ಬಾರದಂತೆ ತಡೆಯಲು ರಾಸಾಯನಿಕವನ್ನು ಬಳಸಲು ಪ್ರಯತ್ನಿಸಿದ್ದಾರೆ. ಇದರಿಂದಾಗಿ ರಾಸಾಯನಿಕ ಸ್ಫೋಟಕ್ಕೆ ಕಾರಣವಾಗಿದೆ, ಇದು ಸ್ಥಳೀಯ ನಿವಾಸಿಗಳಿಗೆ ತಿಳಿದು ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಫ್ಲಾಟ್ ಗೆ ಬಂದು ನೋಡಿದಾಗ ಶವದ ತುಂಡುಗಳನ್ನು ಚದುರಿದ್ದವು. ನಂತರ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು ಮತ್ತು ವಿಧಿವಿಜ್ಞಾನ ತಂಡವು ಈ ಬಗ್ಗೆ ತನಿಖೆ ಪ್ರಾರಂಭಿಸಿದೆ.