News Karnataka Kannada
Thursday, May 09 2024
ಬಿಹಾರ

ಬಿಹಾರದಲ್ಲಿ ಕಳ್ಳಬಟ್ಟಿ ಸಾರಾಯಿ ಸೇವನೆ ಶಂಕೆ, 21 ಮಂದಿ ಸಾವು

Death Body 08082021
Photo Credit :

ಗೋಪಾಲ್ ಗಂಜ್(ಬಿಹಾರ) : ಕಳೆದೆರಡು ದಿನಗಳಿಂದ ಬಿಹಾರದಲ್ಲಿ 21 ಮಂದಿ ಸಾವಿಗೀಡಾಗಿದ್ದಾರೆ. ಮೃತಪಟ್ಟವರ ಪೈಕಿ 13 ಮಂದಿ ಗೋಪಾಲ್ ಗಂಜ್ ನಿವಾಸಿಗಳಾಗಿದ್ದರೆ 8 ಮಂದಿ ಬೆಟ್ಟಿಯಾದವರಾಗಿದ್ದಾರೆ. ಇನ್ನುಳಿದಂತೆ ಗೋಪಾಲ್ ಗಂಜ್ ನ 7 ಹಾಗೂ ಬೆಟ್ಟಿಯಾದ 9 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ.

ತೀವ್ರವಾಗಿ ಅಸ್ವಸ್ಥಗೊಂಡಿರುವ 16 ಮಂದಿಯ ಪೈಕಿ ಮೂವರು ದೃಷ್ಟಿ ಕಳೆದುಕೊಂಡಿದ್ದಾರೆ. ಈ ಎಲ್ಲ ಸಾವು-ನೋವಿಗೆ ನಕಲಿ ಸಾರಾಯಿ ಕಾರಣ ಅನ್ನೋ ಶಂಕೆ ವ್ಯಕ್ತಪಡಿಸಲಾಗುತ್ತಿದೆ.

ಗೋಪಾಲ್‌ಗಂಜ್‌ನಲ್ಲಿ ಮದ್ಯಪಾನ ಮಾಡಿದ ಜನ, ಮೋತಿಹಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರೆಲ್ಲರೂ ಮಹ್ಮದ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕುಶಾಹರ್, ಮಹಮೂದ್‌ಪುರ, ಮಂಗೋಲ್‌ಪುರ, ಬುಚೆಯಾ ನಿವಾಸಿಗಳಾಗಿದ್ದಾರೆ. ಉಳಿದವರು ಛಪ್ರಾದ ಮಸ್ರಖ್ ಪೊಲೀಸ್ ಠಾಣೆಯ ರಸೌಲಿ ಗ್ರಾಮದ ನಿವಾಸಿಗಳು. ಸ್ಥಳೀಯರ ಹೇಳಿಕೆ ಪ್ರಕಾರ, ಮಂಗಳವಾರ ಎಲ್ಲರೂ ಮದ್ಯ ಸೇವಿಸಿದ್ದರು. ಆ ನಂತರ ಅವರ ಆರೋಗ್ಯ ಹದಗೆಡುತ್ತಿದೆ ಅಂತಾ ತಿಳಿಸಿದ್ದಾರೆ. ಬುಧವಾರ ಸಂಜೆಯವರೆಗೆ 8 ಮಂದಿ ಸಾವಿಗೀಡಾಗಿದ್ದಾರೆ ಅಂತಾ ಗ್ರಾಮಸ್ಥರು ಹೇಳಿದ್ದಾರೆ.

ದೀಪಾವಳಿ ಹಬ್ಬದ ವೇಳೆ ಈ ಘಟನೆ ಸಂಚಲನ ಸೃಷ್ಟಿ ಮಾಡಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರವಷ್ಟೇ ಸಾವಿಗೆ ಕಾರಣ ಏನು ಅನ್ನೋದು ಸ್ಪಷ್ಟವಾಗಲಿದೆ ಅಂತಾ ಪೊಲೀಸರು ತಿಳಿಸಿದ್ದಾರೆ. ಇನ್ನು ಘಟನೆಯ ನಂತರ ಗಣಿಗಾರಿಕೆ ಸಚಿವ ಜನಕ್ ರಾಮ್ ಅವರು ಮೃತರ ಮನೆಗೆ ಭೇಟಿ ಕೊಟ್ಟರು. ಬಳಿಕ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅವರು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು