News Karnataka Kannada
Monday, April 29 2024
ಬಿಹಾರ

ಸೋದರಿಯರಿಂದ ಹಾವುಗಳಿಗೆ ರಾಖಿ ಕಟ್ಟಿಸುವ ಪ್ರಯತ್ನದಲ್ಲಿ ಪ್ರಾಣ ಕಳೆದುಕೊಂಡ ಉರಗ ರಕ್ಷಕ

Snake Catcher
Photo Credit :

ಪಾಟ್ನಾ: ಸೋದರಿಯರಿಂದ ವಿಷಕಾರಿ ಹಾವುಗಳಿಗೆ ರಾಖಿ ಕಟ್ಟಿಸಲು ಮುಂದಾಗಿದ್ದ ಯುವಕ ಸಾವನ್ನಪ್ಪಿರುವ ಘಟನೆ ಬಿಹಾರದ ಸಾರಣ ಜಿಲ್ಲೆಯಲ್ಲಿ ನಡೆದಿದೆ. 25 ವರ್ಷದ ಮನಮೋಹನ್ ಉರ್ಫ್ ಬವುರಾ ಸಾವನ್ನಪ್ಪಿದ ಯುವಕ. ಈತ 10 ವರ್ಷಗಳಿಂದ ಹಾವುಗಳ ರಕ್ಷಣೆಯಲ್ಲಿ ತೊಡಗಿಕೊಂಡಿದ್ದನು. ಭಾನುವಾರ ಎರಡು ನಾಗರಹಾವು ಹಿಡಿದಿದ್ದ ಮನಮೋಹನ್ ತನ್ನ ಇಬ್ಬರು ಸೋದರಿಯರಿಂದ ರಾಖಿ ಕಟ್ಟಿಸಲು ಮುಂದಾಗಿದ್ದನು. ಈ ವೇಳೆ ಬಾಲ ಹಿಡಿದುಕೊಂಡಿದ್ದಾಗ ಒಂದು ಹಾವು ಮನಮೋಹನ್ ಹೆಬ್ಬರಳು ಕಚ್ಚಿದೆ.
ಹಾವು ಕಚ್ಚಿದ ಕೂಡಲೇ ಸ್ಥಳೀಯರು ಗಿಡಮೂಲಿಕೆ ಔಷಧಿ ಕೊಟ್ಟು ಚಿಕಿತ್ಸೆ ನೀಡಿದ್ದಾರೆ. ಆದ್ರೆ ಮನಮೋಹನ್ ರೋಗ್ಯ ಏರುಪೇರಾಗಿದ್ದರಿಂದ ಕುಟುಂಬಸ್ಥರು ಜಿಲ್ಲಾಸ್ಪತ್ರೆಗೆ ಕರೆ ತಂದಿದ್ದಾರೆ. ಆದ್ರೆ ಅಲ್ಲಿ ಆ್ಯಂಟಿ ವೆನಮ್ ಇಂಜೆಕ್ಷನ್ ಸಿಗದ ಹಿನ್ನೆಲೆ ನಗರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಮನಮೋಹನ್ ಸಾವನ್ನಪ್ಪಿದ್ದಾನೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 4 / 5. Vote count: 2

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು