Categories: ಬಿಹಾರ

ಸೋದರಿಯರಿಂದ ಹಾವುಗಳಿಗೆ ರಾಖಿ ಕಟ್ಟಿಸುವ ಪ್ರಯತ್ನದಲ್ಲಿ ಪ್ರಾಣ ಕಳೆದುಕೊಂಡ ಉರಗ ರಕ್ಷಕ

ಪಾಟ್ನಾ: ಸೋದರಿಯರಿಂದ ವಿಷಕಾರಿ ಹಾವುಗಳಿಗೆ ರಾಖಿ ಕಟ್ಟಿಸಲು ಮುಂದಾಗಿದ್ದ ಯುವಕ ಸಾವನ್ನಪ್ಪಿರುವ ಘಟನೆ ಬಿಹಾರದ ಸಾರಣ ಜಿಲ್ಲೆಯಲ್ಲಿ ನಡೆದಿದೆ. 25 ವರ್ಷದ ಮನಮೋಹನ್ ಉರ್ಫ್ ಬವುರಾ ಸಾವನ್ನಪ್ಪಿದ ಯುವಕ. ಈತ 10 ವರ್ಷಗಳಿಂದ ಹಾವುಗಳ ರಕ್ಷಣೆಯಲ್ಲಿ ತೊಡಗಿಕೊಂಡಿದ್ದನು. ಭಾನುವಾರ ಎರಡು ನಾಗರಹಾವು ಹಿಡಿದಿದ್ದ ಮನಮೋಹನ್ ತನ್ನ ಇಬ್ಬರು ಸೋದರಿಯರಿಂದ ರಾಖಿ ಕಟ್ಟಿಸಲು ಮುಂದಾಗಿದ್ದನು. ಈ ವೇಳೆ ಬಾಲ ಹಿಡಿದುಕೊಂಡಿದ್ದಾಗ ಒಂದು ಹಾವು ಮನಮೋಹನ್ ಹೆಬ್ಬರಳು ಕಚ್ಚಿದೆ.
ಹಾವು ಕಚ್ಚಿದ ಕೂಡಲೇ ಸ್ಥಳೀಯರು ಗಿಡಮೂಲಿಕೆ ಔಷಧಿ ಕೊಟ್ಟು ಚಿಕಿತ್ಸೆ ನೀಡಿದ್ದಾರೆ. ಆದ್ರೆ ಮನಮೋಹನ್ ರೋಗ್ಯ ಏರುಪೇರಾಗಿದ್ದರಿಂದ ಕುಟುಂಬಸ್ಥರು ಜಿಲ್ಲಾಸ್ಪತ್ರೆಗೆ ಕರೆ ತಂದಿದ್ದಾರೆ. ಆದ್ರೆ ಅಲ್ಲಿ ಆ್ಯಂಟಿ ವೆನಮ್ ಇಂಜೆಕ್ಷನ್ ಸಿಗದ ಹಿನ್ನೆಲೆ ನಗರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಮನಮೋಹನ್ ಸಾವನ್ನಪ್ಪಿದ್ದಾನೆ.

Indresh KC

Recent Posts

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿ ಹೃದಯಾಘಾತದಿಂದ ಮೃತ್ಯು

ಪುಣೆಯಿಂದ ಕುಂದಾಪುರಕ್ಕೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಿನ್ನೆ ಹೊನ್ನಾವರದಲ್ಲಿ ನಡೆದಿದೆ.

13 mins ago

ನೇಹಾ ಹಿರೇಮಠ ನಿವಾಸಕ್ಕೆ ಭೇಟಿ ನೀಡಿದ ಶ್ರೀರಂಭಾಪುರಿ ಜಗದ್ಗುರು

ನೇಹಾ ಹಿರೇಮಠ ನಿವಾಸಕ್ಕೆ ಭೇಟಿ ನೀಡಿದ ಶ್ರೀರಂಭಾಪುರಿ ಜಗದ್ಗುರುಗಳು ಹಿರೇಮಠದ ದಂಪತಿಗೆ ಸಾಂತ್ವನ ಹೇಳಿದರು.

24 mins ago

ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ಇನ್ನಿಲ್ಲ

ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ಅವರು 69ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ.

37 mins ago

ರಜನಿಕಾಂತ್‌ ಸಿನಿಮಾ ತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ

ಸೂಪರ್‌ಸ್ಟಾರ್ ರಜನಿಕಾಂತ್ 171ನೇ ಸಿನಿಮಾ 'ಕೂಲಿ' ಟೈಟಲ್ ಟೀಸರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಇದೀಗ ʻಕೂಲಿʼ ತಂಡಕ್ಕೆ ಸಂಗೀತ ನಿರ್ದೇಶಕ…

41 mins ago

ಚಲಿಸುತ್ತಿದ್ದ ಬಸ್‌ನಿಂದ ಕಳಚಿಕೊಂಡ ಚಕ್ರಗಳು: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ಸಾರಿಗೆ ಬಸ್‌ನ ಚಕ್ರ ಕಳಚಿಕೊಂಡು ಬಸ್‌ನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಬೆಚ್ಚಿಬಿದ್ದಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ…

1 hour ago

ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ಹಣ ಕಳ್ಳತನ: ಆರೋಪಿ ವಶಕ್ಕೆ

ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ಹಣ ಕಳ್ಳತನವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಅಡೋಲು ಪಟ್ಟಣದ ಟೂಟೌನ್ ಪೊಲೀಸ್ ಠಾಣಾ…

1 hour ago