ಬಿಹಾರ: ಇನ್ಸ್ಸ್ಪೆಕ್ಟರ್ವೊಬ್ಬರು ದಲಿತ ಮಹಿಳೆಯನ್ನು ಥಳಿಸಿದ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿಹಾರದ ಸೀತಾಮರ್ಹಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.
ಬಾಲಕಿಯೊಬ್ಬಳ ಅಪಹರಣ ಸಂಬಂಧಿಸಿದಂತೆ ಮಹಿಳೆಯರಿಬ್ಬರ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಎಂಟ್ರಿ ನೀಡಿದ ಇನ್ಸ್ಸ್ಪೆಕ್ಟರ್ ಮಹಿಳೆಗೆ ಲಾಠಿಯಿಂದ ಥಳಿಸಿದ್ದಾರೆ. ಸುರಸಂದ್ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದ್ದು, ಸುರಸಂದ್ ಪೊಲೀಸ್ ಠಾಣೆಯ ಇನ್ಸ್ಸ್ಪೆಕ್ಟರ್ ರಾಜ್ಕಿಶೋರ್ ಸಿಂಗ್ ನಡುರಸ್ತೆಯಲ್ಲೇ ಮಹಿಳೆಗೆ ಲಾಠಿಯಿಂದ ಹೊಡೆದಿದ್ದಾರೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಗಲಾಟೆ ಮಾಡುತ್ತಿದ್ದ ಮಹಿಳೆಯನ್ನು ಬೇರ್ಪಡಿಸುವ ದೃಷ್ಟಿಯಿಂದ ಇನ್ಸ್ಸ್ಪೆಕ್ಟರ್ ಲಾಠಿಯಲ್ಲಿ ಥಳಿಸಿದ್ದಾರೆ ಎನ್ನಲಾಗುತ್ತಿದೆ. ಆದರೂ ಹೀಗೆ ಥಳಿಸಿದ ಇನ್ಸ್ಸ್ಪೆಕ್ಟರ್ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ.
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…