ಬಿಹಾರ: ಎದೆ ನೋವು ಹಿನ್ನೆಲೆಯಲ್ಲಿ ಬಿಹಾರ ಮಾಜಿ ಮಂತ್ರಿ, ಲಾಲೂ ಪ್ರಸಾದ್ ಯಾದವ್ ಅವರ ಪುತ್ರ, ಆರ್ಜೆಡಿ ನಾಯಕ ತೇಜ್ ಪ್ರತಾಪ್ ಯಾದವ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆರ್ಜೆಡಿ ನಾಯಕರಾಗಿರುವ ತೇಜ್ ಪ್ರತಾಪ್ ಯಾದವ್, ಪಾಟ್ನಾದ ರಾಜೇಂದ್ರ ನಗರದಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಿಹಾರದ ಮಹಾಘಟಬಂಧನ್ ಸರ್ಕಾರದಲ್ಲಿ ತೇಜ್ ಪ್ರತಾಪ್ ಅವರು ಪರಿಸರ ಇಲಾಖೆಯ ಸಚಿವರಾಗಿದ್ದರು. ನಂತರ ಆರೋಗ್ಯ ಸಚಿವರಾಗಿಯೂ ಕೆಲಸ ಮಾಡಿದ್ದಾರೆ.
ಹೆಚ್ಚಿನ ವಿವರ ಇನ್ನೂ ಲಭ್ಯವಾಗಿಲ್ಲ.