ಬಿಹಾರ: ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಆಪ್ತ ಸುಭಾಷ್ ಯಾದವ್ ಅವರನ್ನು ಮಾರ್ಚ್ 22 ರವರೆಗೆ ಪಾಟ್ನಾ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ಲಾಲು ಪ್ರಸಾದ್ ಯಾದವ್ ಅವರ ಆಪ್ತ ಸಹಾಯಕನಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿದ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ ನಂತರ ಯಾದವ್ ಅವರನ್ನು ಬಂಧಿಸಿದ್ದರು.
ಶೋಧದ ವೇಳೆ ಸುಭಾಷ್ ಯಾದವ್ ಅವರನ್ನು ಬಂಧಿಸುವ ಮುನ್ನ ಇಡಿ ಅಧಿಕಾರಿಗಳು ಮರಳು ಗಣಿಗಾರಿಕೆ ಮತ್ತು ಇತರ ಹಣಕಾಸು ವಹಿವಾಟುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪತ್ತೆ ಮಾಡಿದ್ದಾರೆ. ಶೋಧ ಕಾರ್ಯಾಚರಣೆ ವೇಳೆ ಕೇಂದ್ರ ಸಂಸ್ಥೆಯು ಸುಮಾರು 2.37 ಕೋಟಿ ರೂಪಾಯಿ ಮೌಲ್ಯದ ನಗದು ಪತ್ತೆಯಾಗಿದೆ.
ಸುಭಾಷ್ ಅವರು ಬಿಹಾರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ ಮತ್ತು ಪಾಟ್ನಾದಲ್ಲಿ ಪ್ರಮುಖ ಮರಳು ವ್ಯಾಪಾರಿಯಾಗಿದ್ದಾರೆ. ಅವರು ಬ್ರಾಡ್ಸನ್ ಕನ್ಸ್ಟ್ರಕ್ಷನ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕರೂ ಆಗಿದ್ದಾರೆ.
ಮಾರ್ಚ್ 9 ರಂದು ಜಾರಿ ನಿರ್ದೇಶನಾಲಯವು ಆರ್ಜೆಡಿ ನಾಯಕನಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಲಾಲು ಪ್ರಸಾದ್ ಯಾದವ್ ಅವರನ್ನು ಬಂಧಿಸಲಾಗಿತ್ತು.