News Karnataka Kannada
Sunday, May 05 2024
ದೇಶ

ಮಹಿಳೆಯರ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುವುದಿಲ್ಲ: ಹಣಕಾಸು ಸಚಿವೆ

Nirmal
Photo Credit : News Kannada

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಸ್ಥಾನಗಳನ್ನು ನೀಡುವ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಗೆ ರಾಜ್ಯಸಭೆಯಲ್ಲಿಯೂ ಗುರುವಾರ ರಾತ್ರಿ ಅನುಮೋದನೆ ದೊರೆಯಿತು.

ಇನ್ನು ರಾಜ್ಯಸಭೆಯಲ್ಲಿ ನಡೆದ ಚರ್ಚೆಯ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿ, ಮಹಿಳೆಯರ ವಿಷಯದಲ್ಲಿ ಬಿಜೆಪಿ ಯಾವುದೇ ರೀತಿಯ ರಾಜಕೀಯ ಮಾಡುವುದಿಲ್ಲ. ಪಂಚಾಯತಿಗಳಲ್ಲಿ ಶೇ 33ರಷ್ಟು ಮೀಸಲಾತಿಯು ತಳಮಟ್ಟದಲ್ಲಿ ಉತ್ತಮ ಫಲಿತಾಂಶವನ್ನು ಕಂಡಿದೆ ಎಂದರು.

ಪಂಚಾಯತ್​ಗಳನ್ನು ಗಮನಿಸಿದರೆ ಈ ಮಸೂದೆಯ ಕರಡನ್ನು ಬಹಳ ಚಿಂತನಶೀಲವಾಗಿ ಸಿದ್ಧಪಡಿಸಲಾಗಿದೆ ಎಂದು ಹೇಳಬಹುದು. ಈ ಮಸೂದೆಯನ್ನು ಬಹಳ ದಿನಗಳಿಂದ ನಿರೀಕ್ಷಿಸಲಾಗಿದೆ. ಜನಗಣತಿಯ ನಂತರ ಸೀಮೆ ವಿಂಗಡಣೆ ಪ್ರಕ್ರಿಯೆ ಮುಗಿದ ನಂತರವಷ್ಟೇ ಮಹಿಳೆಯರಿಗೆ ಲೋಕಸಭೆ ಮತ್ತು ವಿಧಾನಸಭೆ ಸ್ಥಾನಗಳನ್ನು ಮೀಸಲಿಡಲು ಸಾಧ್ಯ ಎಂದರು. ಈ ಕಾನೂನು ಹದಿನೈದು ವರ್ಷಗಳವರೆಗೆ ಜಾರಿಯಲ್ಲಿರುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಮಹಿಳಾ ಮೀಸಲಾತಿ ಮಸೂದೆ ಅಂಗೀಕೃತಗೊಂಡ ಬಗ್ಗೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಮಸೂದೆ ಅಂಗೀಕಾರಗೊಂಡಿರುವುದು ಭಾರತೀಯ ರಾಜಕೀಯದಲ್ಲಿ ಒಂದು ಮೈಲಿಗಲ್ಲಾಗಿದೆ ಎಂದು ಹೇಳಿದರು. ನಾರಿ ಶಕ್ತಿ ವಂದನ್ ಕಾಯ್ದೆಯಡಿ 2029ರ ಲೋಕಸಭೆ ಚುನಾವಣೆಯಲ್ಲಿ ಶೇ 33ರಷ್ಟು ಮಹಿಳೆಯರ ಉಪಸ್ಥಿತಿಯನ್ನು ಖಚಿತಪಡಿಸಿಕೊಳ್ಳಲಾಗುವುದು. ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಮೀಸಲಾತಿ ಕಲ್ಪಿಸಲು ಕೇಂದ್ರ ಸರ್ಕಾರ ಆರಿಸಿಕೊಂಡ ಮಾರ್ಗ ಸರಿಯಾದದ್ದಾಗಿದೆ ಎಂದು ಅವರು ಹೇಳಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು