News Karnataka Kannada
Monday, May 13 2024
ದೇಶ

ರೈತ ಸಂಘಟನೆಗಳಿಂದ ಭಾರತ್ ಬಂದ್ ಗೆ ಕರೆ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ಬೆಳೆಗೆ ಕನಿಷ್ಠ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಫೆ.೧೬ರಂದ ರೈತ ಸಂಘಟನೆಗಳ ಒಕ್ಕೂಟ ಭಾರತ್ ಬಂದ್ ಮಾಡಲು ಮುಂದಾಗಿದೆ.
Photo Credit : News Kannada

ನವದೆಹಲಿ: ಬೆಳೆಗೆ ಕನಿಷ್ಠ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಫೆ.೧೬ರಂದ ರೈತ ಸಂಘಟನೆಗಳ ಒಕ್ಕೂಟ ಭಾರತ್ ಬಂದ್ ಮಾಡಲು ಮುಂದಾಗಿದೆ.

ಈ ಕುರಿತು ನೋಯ್ಡಾದಲ್ಲಿ ಮಾಹಿತಿ ನೀಡಿದ ಭಾರತ ರಾಷ್ಟ್ರೀಯ ಕಿಸಾನ್ ಯೂನಿಯನ್ (BKU)ನ ವಕ್ತಾರ ರಾಕೇಶ್ ಟಿಕಾಯತ್, ರೈತರ ಬಹುದಿನದ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾವು ಬಂದ್ ಗೆ ಕರೆ ಕೊಟ್ಟಿದ್ದೇವೆ. ಅಂದು ರೈತರು ಹೊಲಗಳಿಗೆ ಹೋಗದೆ ಬಂದ್ ನಲ್ಲಿ ಭಾಗವಹಿಸುತ್ತಾರೆ. ಈ ಮೂಲಕ ದೊಡ್ಡ ಸಂದೇಶ ರವಾನೆಯಾಗಲಿದ್ದು, ವ್ಯಾಪಾರಿಗಳೂ ಸಹ ತಮ್ಮ ವ್ಯಾಪರವನ್ನು ಸ್ಥಗಿತಗೊಳಿಸಬೇಕು ಎಂದು ಕೇಳಿಕೊಂಡಿದ್ದಾರೆ.

ಬಂದ್ ಗೆ ರೈತ ಸಂಘಟನೆಗಳು, ವ್ಯಾಪಾರಿಗಳು ಮತ್ತು ಸಾರಿಗೆ ಸಂಸ್ಥೆಗಳ ಬೆಂಬಲ ಬೇಕೆಂದು ಅವರು ಮನವಿ ಮಾಡಿದ್ದಾರೆ.

ರೈತರ ಬೆಳೆಗೆ ಸರ್ಕಾರದಿಂದ ಸಿಗಬೇಕಾದ ಕನಿಷ್ಠ ಬೆಂಬಲ ಬೆಲೆ(MSP), ನಿರುದ್ಯೋಗ, ಅಗ್ನಿವೀರ್ ಯೋಜನೆಗೆ ವಿರೋಧ ಮತ್ತು ನಿವೃತ್ತರಾದವರಿಗೆ ಪಂಚಣೆ ಸಿಗದಿರುವುದು ಇತ್ಯಾದಿ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ನೀಡಲಾದ ಬಂದ್ ಕರೆಗೆ ರೈತ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದಾವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು