News Karnataka Kannada
Saturday, May 18 2024
ದೇಶ

ಪ್ರಜಾಪ್ರಭುತ್ವದ ಮರ್ಯಾದೆ ಕಳೆದ ಸಂಸದರು ಪಾಶ್ಚಾತಾಪ ಪಡಲೇಬೇಕು: ಪ್ರಧಾನಿ

ಇಂದಿನಿಂದ ಸಂಸತ್ತಿನಲ್ಲಿ ಮಧ್ಯಂತರ ಬಜೆಟ್​​​​ ಅಧಿವೇಶನ ನಡೆಯಲಿದೆ. ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಈ ಮೂಲಕ ಅಶಿಸ್ತಿನ ಸಂಸದರಿಗೆ’ ಸಂದೇಶವೊಂದನ್ನು ನೀಡಿದ್ದಾರೆ. ಈ ಹಿಂದೆ ನಡೆದ ಚರ್ಚೆಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಹಾಗೂ ಸಂಸತ್ತಿನಲ್ಲಿ ಪ್ರಜಾಪ್ರಭುತ್ವದ ಮರ್ಯಾದೆ ಕಳೆದ ಸಂಸದರು ಪಶ್ಚಾತಾಪ ಪಡಲೇಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
Photo Credit : News Kannada

ದೆಹಲಿ: ಇಂದಿನಿಂದ ಸಂಸತ್ತಿನಲ್ಲಿ ಮಧ್ಯಂತರ ಬಜೆಟ್​​​​ ಅಧಿವೇಶನ ನಡೆಯಲಿದೆ. ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಈ ಮೂಲಕ ಅಶಿಸ್ತಿನ ಸಂಸದರಿಗೆ’ ಸಂದೇಶವೊಂದನ್ನು ನೀಡಿದ್ದಾರೆ. ಈ ಹಿಂದೆ ನಡೆದ ಚರ್ಚೆಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಹಾಗೂ ಸಂಸತ್ತಿನಲ್ಲಿ ಪ್ರಜಾಪ್ರಭುತ್ವದ ಮರ್ಯಾದೆ ಕಳೆದ ಸಂಸದರು ಪಶ್ಚಾತಾಪ ಪಡಲೇಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಕಳೆದ 10 ವರ್ಷಗಳಲ್ಲಿ ಸಂಸದರು ಸಂಸತ್ತಿನಲ್ಲಿ ತಮಗಿಷ್ಟವಾದದ್ದನ್ನು ಮಾಡಿದ್ದಾರೆ. ಇವರನ್ನು ಅಪರಾಧಿಗಳು ಎಂದು ನಾನು ಕರೆಯಬೇಕೆ? ಪ್ರಜಾಪ್ರಭುತ್ವದ ಮರ್ಯಾದೆ ಕಳೆದಿದ್ದಾರೆ. ಇದು ಅವರ ಅಭ್ಯಾಸವಾಗಿರಬಹುದು, ಆದರೆ ಒಂದು ಬಾರಿ ಸಂಸದರು ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಮುಂದಿನ ದಿನದಲ್ಲಿ ನಿಮ್ಮ ಕ್ಷೇತ್ರದಲ್ಲಿ ಈ ಬಗ್ಗೆ ಪ್ರಶ್ನೆ ಮಾಡಬಹುದು ಎಂದು ಹೇಳಿದ್ದಾರೆ.

ಅಧಿವೇಶನದಲ್ಲಿ ವಿರೋಧ ಪಕ್ಷಗಳು ಧ್ವನಿ ಎತ್ತಿದೆ, ಆದರೆ ನಮ್ಮನ್ನು ವಿರೋಧಿಸಬೇಕು ಎಂಬ ಕಾರಣಕ್ಕೆ ವಿರೋಧಿಸಬೇಡಿ. ಅದು ಸಂಸತ್ತಿನ ಸಮಯಕ್ಕೆ ಹಾಗೂ ಚರ್ಚೆಗೆ ತೊಂದರೆ ಮಾಡಬಹುದು. ಈ ದೇಶಕ್ಕೆ ಅಥವಾ ನಮಗೆ ಬೆಳಕು ಚೆಲ್ಲುವವರನ್ನು ಆತ್ಮೀಯವಾಗಿ ಸ್ಮರಿಸಲಾಗುವುದು. ಸಂಸತ್ತಿನಲ್ಲಿ ವಿಷಾದಿಸುವ ಅವಕಾಶವಿದೆ. ಇದನ್ನು ಬಿಡಬೇಡಿ ಎಂದಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು