ಅಮ್ರೇಲಿ: ಗುಜರಾತ್ನ ಅಮ್ರೇಲಿ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ನ ಮಾಜಿ ಸಂಸದ ವಿರ್ಜಿ ತುಮ್ಮಾರ್ ವಿರುದ್ಧ ಗಂಭೀರ ಸ್ವರೂಪವಲ್ಲದ (ನಾನ್ ಕಾಗ್ನಿಜಬಲ್) ಅಪರಾಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಬಿಜೆಪಿಯ ಅಮ್ರೇಲಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮೆಹುಲ್ ಧೋರಾಜಿಯಾ ಅವರು ಸಲ್ಲಿಸಿದ ದೂರು ಆಧರಿಸಿ, ಅಮ್ರೇಲಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜೆ.ಪಿ. ಭಂಡಾರಿ ತಿಳಿಸಿದ್ದಾರೆ.
‘ಡಿ.22 ರಂದು ಕಾಂಗ್ರೆಸ್ನ ಸ್ನೇಹ ಸಂವಾದ ಕಾರ್ಯಕ್ರಮದಲ್ಲಿ ಮೋದಿ ಅವರನ್ನು ‘ದಲಾಲ್’ (ದಲ್ಲಾಳಿ) ಎಂದು ಕರೆದು ಅವಮಾನ ಮಾಡಿದ್ದಾರೆ’ ಎಂದು ಮೆಹುಲ್ ಆರೋಪಿಸಿದ್ದಾರೆ. ಆದರೆ, ಯಾರನ್ನೂ ನೋಯಿಸುವುದು ತಮ್ಮ ಉದ್ದೇಶವಲ್ಲ, ಸಾರ್ವಜನಿಕರ ಪರ ಧ್ವನಿ ಎತ್ತಿದ್ದೇನೆ ಎಂದು ತುಮ್ಮಾರ್ ಹೇಳಿದ್ದಾರೆ.