ಹೈದರಾಬಾದ್: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಮತ್ತು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ನ ಕೆಲವು ಮಾಜಿ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಾಗಿದೆ. ಇವರೆಲ್ಲರೂ ಸಂಘದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಹೈದರಾಬಾದ್ ಪೊಲೀಸರು ಮಾಹಿತಿ ನೀಡಿದ್ದಾರೆ.
ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್ ಕಾಂಟೆ ಬೋಸ್ ನೀಡಿದ ದೂರಿನ ಆಧಾರದ ಮೇಲೆ, ಎಚ್ಸಿಎ ಮಾಜಿ ಅಧ್ಯಕ್ಷ ಅಜರುದ್ದೀನ್ ಮತ್ತು ಇತರ ಮಾಜಿ ಕಾರ್ಯಕರ್ತರ ವಿರುದ್ಧ ಐಪಿಸಿಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಇಲ್ಲಿನ ಉಪ್ಪಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.