ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ(ಸಿಡಬ್ಲ್ಯುಆರ್ಸಿ) ಮತ್ತೆ ಇಂದು ಸಭೆ ಸೇರಲಿದೆ. ನವದೆಹಲಿಯ ಸಿಡಬ್ಲ್ಯುಆರ್ಸಿ ಕಚೇರಿಯಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಕರ್ನಾಟಕದ ಪರವಾಗಿ ಕಾವೇರಿ ನೀರಾವರಿ ನಿಗಮದ ಎಂ.ಡಿ. ಮಹೇಶ್ ಭಾಗಿಯಾಗಲಿದ್ದಾರೆ.
ಇನ್ನು ತಮಿಳುನಾಡು, ಕೇರಳ, ಪುದುಚೇರಿ ಅಧಿಕಾರಿಗಳು, ವಕೀಲರು ಭಾಗವಹಿಸಲಿದ್ದಾರೆ. ಕಳೆದ ಬಾರಿ ತಮಿಳುನಾಡಿಗೆ 15 ದಿನ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡುವಂತೆ ಆದೇಶಿಸಿದ್ದ ಸಮಿತಿ, ಈ ಬಾರಿ ಯಾವ ಆದೇಶ ನೀಡಲಿದೆ ಎನ್ನುವ ಆತಂಕ ಮನೆಮಾಡಿದೆ.