ಚೆನ್ನೈನಲ್ಲಿ ಚಲಿಸಲಿದೆ ಚಾಲಕ ರಹಿತ ರೈಲು; ೧೨ನೇ ಅಂತಸ್ತಿನಲ್ಲಿ ನಿಲ್ದಾಣ

ಚೆನ್ನೈ: ಮುಂಬರುವ ದಿನಗಳಲ್ಲಿ ಚೆನ್ನೈನ ಮೆಟ್ರೋ ರೈಲು ೧೨ ಅಂತಸ್ತಿನ ಕಟ್ಟಡದ ಮುಖಾಂತರ ಸಂಚರಿಸಲಿದ್ದು, ಮೂರನೇ ಮಹಡಿಯಲ್ಲಿ ನಿಲ್ದಾಣಗಳು ಹಾಗು ಉಳಿದ ಕಡೆ ವಾಣಿಜ್ಯ ಮತ್ತು ಉಳಿದ ಕಚೇರಿಗಳು ಇರಲಿವೆ ಎಂದು ಸಿಎಂಆರ್​ಎಲ್ ಮಾಹಿತಿ ನೀಡಿದೆ.

ಚಾಲಕ ರಹಿತ ಮೆಟ್ರೋ ರೈಲುಗಳು ನಗರದ ತಿರುಮಂಗಲಂ, ಕೊಯಂಬೇಡು ಮತ್ತು ತಿರುಮಾಯಿಲೈನಲ್ಲಿ 12 ಅಂತಸ್ತಿನ ಕಟ್ಟಡದ ಮೂಲಕ ಹಾದು ಹೋಗಲಿವೆ. ಚೆನ್ನೈ ಮೆಟ್ರೋ ರೈಲ್ ಲಿಮಿಟೆಡ್ ಮುಂಬರುವ ಎರಡನೇ ಹಂತ ಮೆಟ್ರೋದಲ್ಲಿ 3 ಸ್ಥಳಗಳಲ್ಲಿ ಸಾರಿಗೆ ಆಧಾರಿತ ಅಭಿವೃದ್ಧಿಗೆ ಯೋಜಿಸಿದೆ.
ತಿರುಮಂಗಲಂನಲ್ಲಿ 12 ಅಂತಸ್ತಿನ ಕಟ್ಟಡ ನಿರ್ಮಾಣ ಹಂತದಲ್ಲಿದೆ. ಮೆಟ್ರೋ ಯೋಜನೆಯ ಎರಡನೇ ಹಂತದ ಕಾಮಗಾರಿ ಭರದಿಂದ ಸಾಗುತ್ತಿದೆ.

ಎರಡನೇ ಹಂತದ ಮೆಟ್ರೋ ಯೋಜನೆಯು ಮಾಧವರಂ-ಸಿರುಚೆರಿ, ಪೂನಮಲ್ಲೆ-ವಿವೇಕಾನಂದ ಇಲ್ಲಂ, ಮತ್ತು ಮಾಧವರಂನಿಂದ ಶೋಲಿಂಗನಲ್ಲೂರು ಎಂಬ ಮೂರು ಮಾರ್ಗಗಳನ್ನೊಳಗೊಂಡಿದ್ದು 119 ಕಿ.ಮೀ ದೂರ ಕ್ರಮಿಸಲಿದೆ. ಇದರ ವೆಚ್ಚ 69,000 ಕೋಟಿ ರೂ.ಗಳಾಗಿದೆ.

Maithri S

Recent Posts

ಭೀಕರ ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

6 mins ago

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

31 mins ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

31 mins ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

43 mins ago

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

46 mins ago

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

1 hour ago