ಛತ್ತೀಸ್ಗಢ: ಮಾವೋವಾದಿಗಳ ಭದ್ರಕೋಟೆಯಾಗಿರುವ ಛತ್ತೀಸ್ಗಢ ದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ 29 ನಕ್ಸಲರನ್ನು ಹತ್ಯೆ ಮಾಡಿದ್ದಾರೆ. ರಾಜ್ಯದಲ್ಲಿ ಈವರೆಗಿನ ಅತಿದೊಡ್ಡ ಎನ್ಕೌಂಟರ್ ಇದು ಎಂದೇ ಹೇಳಬಹುದು.
ನಿಷೇಧಿತ ಸಿಪಿಐಯ ಉತ್ತರ ಬಸ್ತಾರ್ ವಿಭಾಗದ ಮುಖ್ಯಸ್ಥ ಶಂಕರ್, ಲಲಿತಾ, ರಾಜು ಮತ್ತು ಇತರರು ಇರುವ ಬಗ್ಗೆ ಮಾಹಿತಿ ಆಧರಿಸಿ ಈ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾಗ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ.
ಎನ್ಕೌಂಟರ್ನಲ್ಲಿ ಭದ್ರತಾ ಪಡೆ ಪ್ರಭಾವಿ ಕಮಾಂಡರ್ ಶಂಕರ್ ರಾವ್ರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದೆ.
ಈ ಮೊದಲು ಕಮಾಂಡರ್ ಶಂಕರ್ ರಾವ್ರನ್ನು ಹಿಡಿದುಕೊಟ್ಟವರಿಗೆ 25 ಲಕ್ಷ ರೂ. ಬಹುಮಾನ ನೀಡುವುದಾಗಿ ಈ ಮೊದಲು ಘೋಷಿಸಲಾಗಿತ್ತು.
ಸ್ಥಳದಿಂದ 29 ನಕ್ಸಲೀಯರ ಮೃತದೇಹಗಳು , ಎಕೆ-47, ಎಸ್ಎಲ್ಆರ್, ಐಎನ್ಎಸ್ಎಎಸ್, 303 ರೈಫಲ್ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.